tamanvi
ಕರಾವಳಿ

ಜೈಲ್ ಜಾಮರ್ ಸಮಸ್ಯೆ: ನಾಗರಿಕರಿಂದ ಜೈಲಿಗೆ ಮುತ್ತಿಗೆ ಹಾಕಲು ಯತ್ನ!!

D_shiva_bhat
ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್‌ ಜಾಮ‌ರ್ ಅಳವಡಿಸಿದ್ದರಿಂದ ಸುತ್ತಲಿನ ಸುಮಾರು 1 ಕಿ. ಮೀ. ಪ್ರದೇಶದಲ್ಲಿ ನೆಟ್‌ವರ್ಕ್ ಸಮಸ್ಯೆ ಉಂಟಾಗಿರುವುದನ್ನು ವಿರೋಧಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ನಾಗರಿಕರು ಪ್ರತಿಭಟನೆ ನಡೆಸಿದ್ದು ಈ ವೇಳೆ ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್‌ ಜಾಮ‌ರ್ ಅಳವಡಿಸಿದ್ದರಿಂದ ಸುತ್ತಲಿನ ಸುಮಾರು 1 ಕಿ. ಮೀ. ಪ್ರದೇಶದಲ್ಲಿ ನೆಟ್‌ವರ್ಕ್ ಸಮಸ್ಯೆ ಉಂಟಾಗಿರುವುದನ್ನು ವಿರೋಧಿಸಿ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಇಂದು ನಾಗರಿಕರು ಪ್ರತಿಭಟನೆ ನಡೆಸಿದ್ದು ಈ ವೇಳೆ ಜೈಲಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

maithri

ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವೇದವ್ಯಾಸ್ ಕಾಮತ್, ಜೈಲಿನಲ್ಲಿ ಜಾಮ‌ರ್ ಅಳವಡಿಸಿದ್ದರಿಂದ ಸುತ್ತಮುತ್ತಲಿನ ಕಚೇರಿ, ಸಾರ್ವಜನಿಕರಿಗೆ ತೊಂದರೆಯಾಗಿದೆ. ಈ ಬಗ್ಗೆ ದೂರು ನೀಡಿದರೂ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಸರಕಾರವೂ ಮೌನ ವಹಿಸಿದೆ. ಜೈಲಿನ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಿದರೆ ಜಾಮರ್ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು.

ಪ್ರತಿಭಟನಾಕಾರರು ಮೊಬೈಲ್‌ಗಳನ್ನು ಒಡೆದು ಆಕ್ರೋಶ ಹೊರಹಾಕಿದ್ದು, ಜೈಲಿಗೆ ನುಗ್ಗಲು ಯತ್ನಿಸಿದ್ದಾರೆ. ಮೊದಲೇ ತಯಾರಾಗಿದ್ದ ಪೊಲೀಸ್‌ ತಂಡ ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…