tamanvi
ಕರಾವಳಿ

ಸಹಸ್ರಚಂದ್ರ ದರ್ಶನ ಶಾಂತಿಯ ಅಂಗವಾಗಿ ಶರಸೇತು ಬಂಧ ತಾಳಮದ್ದಳೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘದ ಗೌರವ ಕಾರ್ಯದರ್ಶಿ ರಂಗನಾಥ ರಾವ್ ಅವರ ಸಹಸ್ರಚಂದ್ರ ದರ್ಶನ ಶಾಂತಿ ಅಂಗವಾಗಿ ಬೆಂಗಳೂರು ಅಕ್ಷಯ ನಗರ ಶ್ರೀ ಸುಬ್ರಹ್ಮಣ್ಯ ಮಠದಲ್ಲಿ ಏ. 28ರಂದು ಪುತ್ತೂರು ಬೊಳುವಾರು ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಹಟ್ಟಿಯಂಗಡಿ ರಾಮ ಭಟ್ಟ ವಿರಚಿತ ‘ಶರಸೇತು ಬಂಧ’ ತಾಳಮದ್ದಳೆ ಜರಗಿತು.

maithri

ಹಿಮ್ಮೇಳದಲ್ಲಿ ಭಾಗವತರಾಗಿ ವಿಷ್ಣು ಪ್ರಸಾದ್ ಕಲ್ಲೂರಾಯ ಹಾಗೂ ಚೆಂಡೆ, ಮದ್ದಲೆಗಳಲ್ಲಿ ಅಕ್ಷಯ್ ರಾವ್ ವಿಟ್ಲ ಮತ್ತು ಶಿಖಿನ್ ಶರ್ಮ ಶರವೂರು ಸಹಕರಿಸಿದರು.

ಮುಮ್ಮೇಳದಲ್ಲಿ ಪ್ರೇಮಲತಾ ರಾವ್ (ಶ್ರೀರಾಮ), ಶುಭಾ ಅಡಿಗ (ಹನುಮಂತ), ಕಿಶೋರಿ ದುಗ್ಗಪ್ಪ ನಡುಗಲ್ಲು (ಅರ್ಜುನ), ಶುಭಾ ಗಣೇಶ್ (ವೃದ್ಧ ವಿಪ್ರ) ಸಹಕರಿಸಿದರು.

ಸಂಘದ ನಿರ್ದೇಶಕ ಭಾಸ್ಕರ ಬಾರ್ಯ ಸ್ವಾಗತಿಸಿ, ವಂದಿಸಿದರು. ಪ್ರೇಮಲತಾ ರಂಗನಾಥ ರಾವ್ ದಂಪತಿಗಳು ಹಾಗೂ ಮಕ್ಕಳು ಕಲಾವಿದರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…