ಕರಾವಳಿ

“ಪ್ರಯಾಣಿಕರೇ ಗಮನಿಸಿ…” – ಪುತ್ತೂರಿನಿಂದ ಮಂಗಳೂರಿಗೆ ಬಸ್ ಇಲ್ಲ! ಉಳಿದ ಪ್ರದೇಶಗಳ ಬಸ್ ಸಂಚಾರದ ಬಗ್ಗೆ ಕೆ.ಎಸ್.ಆರ್.ಟಿ.ಸಿ. ಅಧಿಕಾರಿ ಹೇಳಿಕೆ ಹೀಗಿದೆ!

ಮಂಗಳೂರಿಗೆ ದಿನನಿತ್ಯ ತೆರಳುತ್ತಿದ್ದ ಪ್ರಯಾಣಿಕರು ಎಂದಿನಂತೆ ಪುತ್ತೂರು ಬಸ್ ನಿಲ್ದಾಣಕ್ಕೆ ಬಂದರೆ, ಬಸ್ ಇಲ್ಲ...!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಮಂಗಳೂರಿಗೆ ದಿನನಿತ್ಯ ತೆರಳುತ್ತಿದ್ದ ಪ್ರಯಾಣಿಕರು ಎಂದಿನಂತೆ ಪುತ್ತೂರು ಬಸ್ ನಿಲ್ದಾಣಕ್ಕೆ ಬಂದರೆ, ಬಸ್ ಇಲ್ಲ…!

Shani-pooja

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ದೊಡ್ಡ ಪ್ರಮಾಣದಲ್ಲೇ ಸೇರಿದ್ದರು. ಮಂಗಳೂರಿಗೆ ತೆರಳುವ ಒಂದೇ ಒಂದು ಬಸ್ ಇಲ್ಲ ಎನ್ನುವುದನ್ನು ತಿಳಿದು, ಗೊಂದಲಕ್ಕೆ ಒಳಗಾದರು.

ಇದೇ ವೇಳೆ, ಕೆ.ಎಸ್.ಆರ್.ಟಿ.ಸಿ. ಅನೌನ್ಸ್’ಮೆಂಟ್ ಮಾಡಿದ್ದು – “ಪ್ರಯಾಣಿಕರೇ ಗಮನಿಸಿ, ಮಂಗಳೂರಿಗೆ ಯಾವುದೇ ಬಸ್ ಸಂಚರಿಸುತ್ತಿಲ್ಲ” ಎಂದು ಮೊಳಗಿತು.

ಮಡಿಕೇರಿಯಿಂದ ಬಸ್ ಆಗಮಿಸಿದ್ದು, ಕೆಲವರು ಬಸ್ ಹತ್ತಿದರು. ಜಿಲ್ಲೆಯಲ್ಲಿ ಸಂಚಾರ ಇಲ್ಲದೇ ಇರುವುದರಿಂದ ಬಸ್ ಎಲ್ಲಿವರೆಗೆ ಹೋಗುತ್ತದೆಯೋ, ಅಲ್ಲಿವರೆಗೆ ಮಾತ್ರ ಹೋಗುವುದಾಗಿ ಕಂಡಕ್ಟರ್ ತಿಳಿಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಸ್.ಆರ್.ಟಿ.ಸಿ. ಅಧಿಕಾರಿ, “ಮಂಗಳೂರಿಗೆ ಬಸ್ ಬಿಡುತ್ತಿಲ್ಲ. ಉಳಿದ ಪ್ರದೇಶಗಳಿಗೆ ಬಸ್ ಬಿಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts