tamanvi
ಕರಾವಳಿ

ಧರ್ಮಸ್ಥಳ ತಲುಪಿದ ಆಕಾಂಕ್ಷಾ ಮೃತದೇಹ! ಪಂಜಾಬ್ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಏರೋಸ್ಪೇಸ್ ಉದ್ಯೋಗಿನಿ!

D_shiva_bhat
ಪಂಜಾಬ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್ (22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಪಂಜಾಬ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಸ್ಥಳ ಬೊಳಿಯಾರ್ ನಿವಾಸಿ, ಏರೋಸ್ಪೇಸ್ ಉದ್ಯೋಗಿಯಾಗಿದ್ದ ಆಕಾಂಕ್ಷಾ ಎಸ್. ನಾಯರ್ (22) ಅವರ ಮೃತದೇಹ ಬುಧವಾರ ಬೆಳಗ್ಗೆ ಮನೆಗೆ ತಲುಪಿದೆ.

maithri

ಆಕಾಂಕ್ಷಾ ಮೃತದೇಹ ಬೆಂಗಳೂರು ವಿಮಾನ ನಿಲ್ದಾಣದಿಂದ ಆಂಬುಲೆನ್ಸ್ ಮೂಲಕ ಧರ್ಮಸ್ಥಳದ ಬೊಳಿಯರ್ ಗೆ ಬುಧವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ತರಲಾಯಿತು.

ಮನೆಯಲ್ಲಿ ತಂದೆ ತಾಯಿಯರ ಆಕ್ರಂದನ ಮುಗಿಲು ಮುಟ್ಟಿದ್ದು ನೂರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಯ ಎರಡನೇ ಪುತ್ರಿ ದಿಲ್ಲಿಯಲ್ಲಿ ಏರೋಸ್ಪೇಸ್ ಉದ್ಯೋಗಿಯಾಗಿದ್ದರು. ವಿದೇಶಕ್ಕೆ ಉದ್ಯೋಗಕ್ಕೆ ತೆರಳುವ ಇರಾದೆ ಹೊಂದಿದ್ದ ಆಕಾಂಕ್ಷಾ ಸರ್ಟಿಫಿಕೆಟ್ ಗಳನ್ನು ಪಡೆಯುವುದಕ್ಕಾಗಿ ತಾನು ಕಲಿತ ಪಂಜಾಬಿನ ಎಲ್.ಪಿ. ವಿಶ್ವವಿದ್ಯಾನಿಲಯಕ್ಕೆ ತೆರಳಿದ್ದರು. ಅಲ್ಲಿ ಮೇ 17ರಂದು ಕಾಲೇಜು ಕಟ್ಟಡದ 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪಂಜಾಬಿಗೆ ತೆರಳಿದ್ದ ಮೃತಳ ಹೆತ್ತವರು ಮಗಳ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದರು. ಅದರಂತೆ ಪಂಜಾಬ್ ಪೊಲೀಸರು ಎಲ್.ಪಿ.ಯು ಪ್ರಾಧ್ಯಾಪಕ ಕೇರಳ ಮೂಲದ ಬಿಜಿಲ್ ಮ್ಯಾಥ್ಯೂ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…