tamanvi
ಕರಾವಳಿ

ಸಾವಯವ ಕೃಷಿ ಉತ್ಪನ್ನಗಳ ಬಳಕೆಗೆ ಜಾಗೃತಿ ಅಗತ್ಯ : ಡಾ. ನಿವೇದಿತಾ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮನೆಯ ಪರಿಸರದಲ್ಲಿ ಲಭ್ಯವಿರುವ ಸ್ಥಳದಲ್ಲಿ ಹಣ್ಣು ತರಕಾರಿಗಳನ್ನು ಬೆಳೆಸಿ ಬಳಸುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಅಗತ್ಯವಿದೆ. ಮಾರುಕಟ್ಟೆಯಲ್ಲಿ ಸಿಗುವ ಹೆಚ್ಚಿನ ವಸ್ತುಗಳು ವಿಷಕಾರಿ ಅಂಶಗಳನ್ನು ಹೊಂದಿದ್ದು ಇದರ ಬಗ್ಗೆ ಜಾಗೃತಿಯ ಅಗತ್ಯವಿದೆಯೆಂದು ಅಡ್ಯನಡ್ಕದ ವಾರಣಾಸಿ ಫಾರ್ಮ್ಸ್ ನ ಡಾ. ನಿವೇದಿತಾ ತಿಳಿಸಿದರು.

maithri

ಪುತ್ತೂರು ನಗರದ ಶ್ರೀಮಾ ನಿವಾಸದಲ್ಲಿ ಜರಗಿದ ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ರಿ.ಮೆಲ್ಕಾರು  ಕೇಂದ್ರ ಸಮಿತಿಯ ಸಭೆಯಲ್ಲಿ ಅವರು ಸಾವಯವ ಕೃಷಿಯ ಬಗ್ಗೆ ಉಪನ್ಯಾಸ ನೀಡಿ  ಮಾತನಾಡಿದರು.

ಪುತ್ತೂರು ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರಾದ  ಪ್ರೊ.ವೇದವ್ಯಾಸ ರಾಮಕುಂಜ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರತಿಷ್ಠಾನದ ಅಧ್ಯಕ್ಷರಾದ ಕಯ್ಯೂರು ನಾರಾಯಣ ಭಟ್ ಮಾತನಾಡಿ ತಾಲೂಕು ಘಟಕಗಳ ಪುನಸ್ಚೇತನ, ಪ್ರತಿಷ್ಠಾನದ ಸದಸ್ಯರಿಗೆ ಸ್ಥಳ ಭೇಟಿ ಕಾರ್ಯಕ್ರಮ ಮತ್ತು ಒಂದು ದಿನದ ಕಾರ್ಯಗಾರ ಏರ್ಪಡಿಸುವ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಹಿಳಾ ಘಟಕದ ಸಂಚಾಲಕಿ ವತ್ಸಲಾ ರಾಜ್ಣಿ, ಶಂಕರಿ ಶರ್ಮಾ ಪುತ್ತೂರು, ಈಶ್ವರ ಭಟ್ ಗುಂಡ್ಯಡ್ಕ, ಉದಯಶಂಕರ ರೈ ಪುಣಚ, ಪುತ್ತೂರು ಘಟಕದ ಅಧ್ಯಕ್ಷ ಚಂದ್ರಶೇಖರ ಆಳ್ವ ಪಡುಮಲೆ, ಭವಾನಿ ಶಂಕರ ಶೆಟ್ಟಿ ಪುತ್ತೂರು ಉಪಸ್ಥಿತರಿದ್ದರು.

ಶಂಕರಿ ಶರ್ಮ ಪ್ರಾರ್ಥಿಸಿ, ಪ್ರತಿಷ್ಠಾನದ ಸಂಚಾಲಕ ಭಾಸ್ಕರ ಬಾರ್ಯ ಸ್ವಾಗತಿಸಿದರು. ಕೋಶಾಧಿಕಾರಿ ಅನಾರು ಕೃಷ್ಣಶರ್ಮ ವಂದಿಸಿದರು. ಪ್ರಧಾನ ಕಾರ್ಯದರ್ಶಿ ದಿವಾಕರ ಆಚಾರ್ಯ ಗೇರುಕಟ್ಟೆ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…