tamanvi
ಕರಾವಳಿ

ಗ್ಯಾರಂಟಿಗಿಂತಲೂ ನೆಮ್ಮದಿ, ಶಾಂತಿಯಿಂದ ಬದುಕುವ ಗ್ಯಾರಂಟಿ ಅಗತ್ಯ: ಇನಾಯತ್ ಆಲಿ ಆಕ್ರೋಶ

D_shiva_bhat
ಕರಾವಳಿಯಲ್ಲಿ ನಡೆದ ಕೊಲೆ ಕೃತ್ಯಗಳ ಮೂಲ ಪತ್ತೆ ಹಚ್ಚಿ, ಅದಕ್ಕೆ ಕುಮ್ಮಕ್ಕು ನೀಡುವಂತಹ ಶಕ್ತಿಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಕಾನೂನು ಶಿಕ್ಷೆ ಆಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕರಾವಳಿಯಲ್ಲಿ ನಡೆದ ಕೊಲೆ ಕೃತ್ಯಗಳ ಮೂಲ ಪತ್ತೆ ಹಚ್ಚಿ, ಅದಕ್ಕೆ ಕುಮ್ಮಕ್ಕು ನೀಡುವಂತಹ ಶಕ್ತಿಗಳ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಕಠಿಣ ಕಾನೂನು ಶಿಕ್ಷೆ ಆಗಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಆಗ್ರಹಿಸಿದ್ದಾರೆ.

maithri

ಸರಕಾರ ದ್ವೇಷ ಭಾಷಣಕಾರರು ಮತ್ತು ಕೋಮು ಪ್ರಚೋದನೆ ಮಾಡುವ ದುಷ್ಟ ಶಕ್ತಿಗಳ ವಿರುದ್ಧ ಅತ್ಯಂತ ಕಠಿಣ ಕ್ರಮ ಜರುಗಿಸಿ ಇಲ್ಲಿನ ಜನರಿಗೆ ಮಿಕ್ಕ ಎಲ್ಲಾ ಗ್ಯಾರಂಟಿಗಳಿಗಿಂತ ಹೊರತಾಗಿ ಮೊದಲು ಗೌರವಯುತವಾಗಿ, ನೆಮ್ಮದಿಯಿಂದ ಬದುಕುವ ಗ್ಯಾರಂಟಿಯನ್ನು, ಶಾಂತಿಯುತ ವಾತಾವರಣವನ್ನು ನಿರ್ಮಿಸಿ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ಅಮಾಯಕ ಯುವಕನ ಕೊಲೆಗೆ ದಕ್ಷಿಣ ಕನ್ನಡ ಜಿಲ್ಲೆ ಬೆಚ್ಚಿ ಬಿದ್ದಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ನಡೆಯುತ್ತಿರುವ ಅಹಿತಕರ, ಕೋಮು ಸಂಘರ್ಷ ಹುಟ್ಟು ಹಾಕುವಂತಹ ಘಟನೆಗಳು ಜಿಲ್ಲೆಯ ಜನರ ನೆಮ್ಮದಿಯನ್ನು ಹಾಳುಗೆಡಹಿದೆ. ಶಾಂತಿಯ ವಾತಾವರಣವನ್ನು ಕೆಡಿಸಿ ಆ ಮೂಲಕ ರಾಜಕೀಯ ಲಾಭ ಪಡೆದುಕೊಳ್ಳುವ ಹುನ್ನಾರಗಳ ಭಾಗವಾಗಿ ಇಂತಹ ಘಟನೆಗಳು ಮರುಕಳಿಸುತ್ತಿವೆ.

ಪ್ರತಿಯೊಂದು ಘಟನೆಗಳು ನಡೆದಾಗಲೂ ಅದನ್ನು ಸರಕಾರಕ್ಕೆ ತಲುಪಿಸುವಂಹ ಕೆಲಸ ನಡೆದರೂ ರಾಜ್ಯದ ಗೃಹ ಇಲಾಖೆ ಈ ಬಗ್ಗೆ ಗಮನ ಹರಿಸಿಲ್ಲ. ಕಠಿಣ ಕಾನೂನು ಕ್ರಮ ಕೈಗೊಳ್ಳುವ ಭರವಸೆಗಳು ಒಂದೂ ಈಡೇರಿಲ್ಲ. ಹಾಗಾಗಿ, ಇನ್ನಾದರೂ ಕರಾವಳಿಯ ಈ ನೆತ್ತರ ರಾಜಕೀಯ ಕೊನೆಯಾಗಬೇಕಿದೆ ಎಂದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…