ಕರಾವಳಿ

ಮುಸ್ಲಿಂ ಮುಖಂಡರು, ಕಾರ್ಯಕರ್ತರಿಂದ ಶುಕ್ರವಾರ ಕಾಂಗ್ರೆಸಿಗೆ ಸಾಮೂಹಿಕ ರಾಜೀನಾಮೆ!

ಶುಕ್ರವಾರದಂದು ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಬೂತ್ ಮತ್ತು ತಾಲೂಕು ಮಟ್ಟದ ಮುಸ್ಲಿಂ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಶುಕ್ರವಾರದಂದು ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಬೂತ್ ಮತ್ತು ತಾಲೂಕು ಮಟ್ಟದ ಮುಸ್ಲಿಂ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.

akshaya college

ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅಮಾಯಕರ ಕೊಲೆ, ಸಮುದಾಯದ ಅವಹೇಳನ ಇದೆಲ್ಲವನ್ನು ಖಂಡಿಸಿ ಹಲವಾರು ಬಾರಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈ ಗೊಳ್ಳದೆ ನಿರ್ಲಕ್ಷ್ಯ ತೋರಿದರಿಂದ ದಿನದಿಂದ ದಿನಕ್ಕೆ ಜಿಲ್ಲೆ ಹಾಗೂ ರಾಜ್ಯದ ಕೆಲ ಭಾಗಗಲ್ಲಿ ಮುಸ್ಲಿಂ ಸಮುದಾಯ ಹಲವಾರು ಸಂಕಷ್ಟಗಳನ್ನು ಎದುರಿಸುವ ಪರಿಸ್ಥಿತಿ ಬಂದಿದೆ.

ಮುಸ್ಲಿಂ ಸಮುದಾಯದ 80% ಮತ ಪಡೆದು ರಚನೆಯಾಗಿರುವ ಸರಕಾರದಿಂದ ಈ ಸಮುದಾಯಕ್ಕೆ 10% ಸುರಕ್ಷತೆ ನೀಡಲು ಸಾಧ್ಯವಿಲ್ಲ ಎಂದಾದರೆ ನಾವು ಪಕ್ಷದಲ್ಲಿ ಮುಂದುವರಿಯುವುದರಲ್ಲಿ ಪ್ರಯೋಜನವಿಲ್ಲ. ನಾಯಕರು ಎಂದು ಅಂದುಕೊಂಡವರು ರಾಜಕೀಯ ಲಾಭಕೋಸ್ಕರ ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಯಾವುದೇ ಮನವಿಯನ್ನು ಕೂಡ ಗಂಭೀರವಾಗಿ ಪರಿಗಣಿಸುತಿಲ್ಲ.

ಮುಂದಿನ ಶುಕ್ರವಾರ ಅಂದರೆ ಮೇ 30 ರಂದು ಮಧ್ಯಾಹ್ನ 3 ಗಂಟೆಗೆ ಬ್ಲಾಕ್ ಕಾಂಗ್ರೆಸ್‌ ಕಚೇರಿಯಲ್ಲಿ ರಾಜೀನಾಮೆ ನೀಡುವುದಾಗಿ ತೀರ್ಮಾನಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜನಾರ್ದನ ಪೂಜಾರಿ ಅವರಿಂದ ಕೋಮು ವೈಷಮ್ಯ ಬಿತ್ತುವ ಕೆಲಸ: ಎಚ್. ಮಹಮ್ಮದ್ ಆಲಿ | ಚರ್ಚ್’ನಲ್ಲಿ ದಫನವಿಲ್ಲ: ಮೌರಿಸ್ ಮಸ್ಕರೇನಸ್

ಪುತ್ತೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಶವಗಳ ಶೋಧ ಪ್ರಕರಣದಲ್ಲಿ ಮುಸ್ಲಿಮ್ ಮತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…