tamanvi
ಕರಾವಳಿ

ಮುಸ್ಲಿಂ ಮುಖಂಡರು, ಕಾರ್ಯಕರ್ತರಿಂದ ಶುಕ್ರವಾರ ಕಾಂಗ್ರೆಸಿಗೆ ಸಾಮೂಹಿಕ ರಾಜೀನಾಮೆ!

D_shiva_bhat
ಶುಕ್ರವಾರದಂದು ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಬೂತ್ ಮತ್ತು ತಾಲೂಕು ಮಟ್ಟದ ಮುಸ್ಲಿಂ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಶುಕ್ರವಾರದಂದು ಚಾರ್ಮಾಡಿ ಗ್ರಾಮ ವ್ಯಾಪ್ತಿಯ ಬೂತ್ ಮತ್ತು ತಾಲೂಕು ಮಟ್ಟದ ಮುಸ್ಲಿಂ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡುವ ಬಗ್ಗೆ ಚರ್ಚಿಸಿ ತೀರ್ಮಾನಿಸಲಾಯಿತು.

maithri

ದಕ್ಷಿಣ ಕನ್ನಡ ಜಿಲ್ಲೆಯಾದ್ಯಾಂತ ಮುಸ್ಲಿಮರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅಮಾಯಕರ ಕೊಲೆ, ಸಮುದಾಯದ ಅವಹೇಳನ ಇದೆಲ್ಲವನ್ನು ಖಂಡಿಸಿ ಹಲವಾರು ಬಾರಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಗೃಹ ಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈ ಗೊಳ್ಳದೆ ನಿರ್ಲಕ್ಷ್ಯ ತೋರಿದರಿಂದ ದಿನದಿಂದ ದಿನಕ್ಕೆ ಜಿಲ್ಲೆ ಹಾಗೂ ರಾಜ್ಯದ ಕೆಲ ಭಾಗಗಲ್ಲಿ ಮುಸ್ಲಿಂ ಸಮುದಾಯ ಹಲವಾರು ಸಂಕಷ್ಟಗಳನ್ನು ಎದುರಿಸುವ ಪರಿಸ್ಥಿತಿ ಬಂದಿದೆ.

ಮುಸ್ಲಿಂ ಸಮುದಾಯದ 80% ಮತ ಪಡೆದು ರಚನೆಯಾಗಿರುವ ಸರಕಾರದಿಂದ ಈ ಸಮುದಾಯಕ್ಕೆ 10% ಸುರಕ್ಷತೆ ನೀಡಲು ಸಾಧ್ಯವಿಲ್ಲ ಎಂದಾದರೆ ನಾವು ಪಕ್ಷದಲ್ಲಿ ಮುಂದುವರಿಯುವುದರಲ್ಲಿ ಪ್ರಯೋಜನವಿಲ್ಲ. ನಾಯಕರು ಎಂದು ಅಂದುಕೊಂಡವರು ರಾಜಕೀಯ ಲಾಭಕೋಸ್ಕರ ನಮ್ಮನ್ನು ಬಳಸಿಕೊಳ್ಳುತ್ತಿದ್ದಾರೆ. ನಮ್ಮ ಯಾವುದೇ ಮನವಿಯನ್ನು ಕೂಡ ಗಂಭೀರವಾಗಿ ಪರಿಗಣಿಸುತಿಲ್ಲ.

ಮುಂದಿನ ಶುಕ್ರವಾರ ಅಂದರೆ ಮೇ 30 ರಂದು ಮಧ್ಯಾಹ್ನ 3 ಗಂಟೆಗೆ ಬ್ಲಾಕ್ ಕಾಂಗ್ರೆಸ್‌ ಕಚೇರಿಯಲ್ಲಿ ರಾಜೀನಾಮೆ ನೀಡುವುದಾಗಿ ತೀರ್ಮಾನಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…