ಕರಾವಳಿ

ದ.ಕ. ಎಸ್ಪಿ, ಕಮೀಷನರ್ ವರ್ಗಾವಣೆ!! ಪವರ್’ಫುಲ್ ಅಧಿಕಾರಿಗಳ ಎಂಟ್ರಿ – ಎಸ್ಪಿಯಾಗಿ ಅರುಣ್ ಕುಮಾರ್, ಕಮೀಷನರ್ ಆಗಿ ಸುಧೀರ್ ಕುಮಾರ್ ರೆಡ್ಡಿ!

ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನರ್ ಅಗರ್'ವಾಲ್ ವರ್ಗಾವಣೆಗೊಂಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೋಮು ದ್ವೇಷದಿಂದ ದಹದಹಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲೆಗೆ ಪವರ್ ಫುಲ್ ಐಪಿಎಸ್ ಅಧಿಕಾರಿಗಳು ಎಂಟ್ರಿ ಪಡೆದುಕೊಂಡಿದ್ದಾರೆ. ಈಗಿರುವ ಎಸ್ಪಿ ಯತೀಶ್ ಹಾಗೂ ಕಮೀಷನರ್ ಅಗರ್’ವಾಲ್ ವರ್ಗಾವಣೆಗೊಂಡಿದ್ದಾರೆ.

akshaya college

2017ರಲ್ಲಿ ದಕ ಎಸ್ಪಿಯಾಗಿ ಹೊಸ ಭಾಷ್ಯ ಬರೆದಿದ್ದ ಸುಧೀರ್ ಕುಮಾರ್ ರೆಡ್ಡಿ ಮತ್ತೆ ಮಂಗಳೂರು ಕಮೀಷನರ್ ಆಗಿ ಬರುತ್ತಿದ್ದಾರೆ. ಅದೇ ರೀತಿ ಉಡುಪಿಯ ಎಸ್ಪಿಯಾಗಿರುವ ಅರುಣ್ ಕುಮಾರ್ ಅವರು ದಕ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.

ಸುಧೀರ್ ಕುಮಾರ್ ರೆಡ್ಡಿ ಹೆಸರು ಕೇಳಿದರೇನೆ ಕೆಲವರಿಗೆ ಸಣ್ಣಗೆ ಬೆನ್ನುಹುರಿಯಲ್ಲಿ ನಡುಕ ಶುರು ಆಗುತ್ತದೆ. ದಕ ಎಸ್ಪಿಯಾಗಿದ್ದ ಸಂದರ್ಭ ಅವರ ಕಾರ್ಯವೈಖರಿಯೇ ಇದಕ್ಕೆ ಕಾರಣ. ಹಲವು ಕಾರ್ಯಾಚರಣೆಗಳ ಮೂಲಕ ಮನೆಮಾತಾದವರು.

ದಕದಿಂದ ಬೆಳಗಾವಿಗೆ ಎಸ್ಪಿಯಾಗಿ ತೆರಳಿದ ಅವರು, ನಂತರ ಆಂಧ್ರಕ್ಕೆ ವರ್ಗಾವಣೆ ಆಗಿದ್ದರು. ನಂತರ ರಾಜ್ಯದ ಗುಪ್ತಚರ ವಿಭಾಗದ ಐಜಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೀಗ ಬೂದಿ ಮುಚ್ಚಿದ ಕೆಂಡದಂತಿರುವ ದ.ಕ.ಕ್ಕೆ ಕಮೀಷನರ್ ಆಗಿ ಬರುತ್ತಿದ್ದಾರೆ.

ಅರುಣ್ ಕುಮಾರ್ ಕೂಡ ಉಡುಪಿಯಲ್ಲಿ ತಮ್ಮ ಐಪಿಎಸ್ ಖದರ್ ತೋರಿಸಿ, ಜನರಲ್ಲಿ ಆರಕ್ಷಕರ ಬಗ್ಗೆ ಗೌರವ ಮೂಡುವಂತಹ ಕೆಲಸ ಮಾಡುತ್ತಿದ್ದಾರೆ ಎಂಬ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…