ಕರಾವಳಿ

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಆಗಿ ರಾಜ್ಯ ಸರಕಾರ ಗುರುತರ ಜವಾಬ್ದಾರಿ ನೀಡಿದ್ದು, ಶುಕ್ರವಾರ ಸಂಜೆ 7 ಗಂಟೆಗೆ ಮಂಗಳೂರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಆಗಿ ರಾಜ್ಯ ಸರಕಾರ ಗುರುತರ ಜವಾಬ್ದಾರಿ ನೀಡಿದ್ದು, ಶುಕ್ರವಾರ ಸಂಜೆ 7 ಗಂಟೆಗೆ ಮಂಗಳೂರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.

akshaya college

ನಿರ್ಗಮನ ಆಯುಕ್ತ ಅನುಪಮ್ ಅಗರ್‌ವಾಲ್ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದರು.ಗುಪ್ತಚರ ಇಲಾಖೆಯ ಡಿಐಜಿ ಆಗಿ ಕಾರ್ಯನಿರ್ವಹಿಸಿದ್ದರು. ಆಂಧ್ರಪ್ರದೇಶದ ಗುಂಟೂರು ಮೂಲದ ಸುಧೀರ್ ಕುಮಾರ್ ರೆಡ್ಡಿ 2017-18ರಲ್ಲಿ ದ.ಕ.ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.

ನನಗೆ ಗೊತ್ತಿರುವುದು ಒಂದೇ ‘ಅದು ಕಾನೂನು’. ಅದರಲ್ಲಿ ಒಬ್ಬರಿಗೆ ಒಂದು ರೀತಿ, ಇನ್ನೊಬ್ಬರಿಗೆ ಇನ್ನೊಂದು ರೀತಿ ಎಂದಿಲ್ಲ, ಅದು ಎಲ್ಲರಿಗೂ ಒಂದೇ ಎಂದು ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಶುಕ್ರವಾರ ಸಂಜೆ ನಿರ್ಗಮಿತ ಕಮಿಷನರ್ ಅನುಪಮ್ ಅಗ್ರವಾಲ್ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ಈಗ ತಾನೇ ಅಧಿಕಾರ ವಹಿಸಿಕೊಂಡಿದ್ದೇನೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮೊದಲು ಮಾಡುತ್ತೇನೆ. ನಗರದ ಜನತೆಗೆ ಯಾವ ಅನುಮಾನವೂ ಬೇಡ. ಕಾನೂನು ಏನು ಹೇಳುತ್ತದೋ ಅದರ ಪ್ರಕಾರವೇ ನಾನು ನಡೆಯುವುದು. ಬೇರೇನೂ ನನಗೆ ಗೊತ್ತಿಲ್ಲ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…