tamanvi
ಕರಾವಳಿ

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

D_shiva_bhat
ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಆಗಿ ರಾಜ್ಯ ಸರಕಾರ ಗುರುತರ ಜವಾಬ್ದಾರಿ ನೀಡಿದ್ದು, ಶುಕ್ರವಾರ ಸಂಜೆ 7 ಗಂಟೆಗೆ ಮಂಗಳೂರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ನಗರ ಪೊಲೀಸ್‌ ಕಮಿಷನ‌ರ್ ಆಗಿ ರಾಜ್ಯ ಸರಕಾರ ಗುರುತರ ಜವಾಬ್ದಾರಿ ನೀಡಿದ್ದು, ಶುಕ್ರವಾರ ಸಂಜೆ 7 ಗಂಟೆಗೆ ಮಂಗಳೂರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ.

maithri

ನಿರ್ಗಮನ ಆಯುಕ್ತ ಅನುಪಮ್ ಅಗರ್‌ವಾಲ್ ಅವರಿಂದ ಅಧಿಕಾರ ಸ್ವೀಕರಿಸಿರುವ ಸುಧೀರ್ ಕುಮಾರ್ ರೆಡ್ಡಿ 2010ರ ಬ್ಯಾಚ್‌ನ ಅಧಿಕಾರಿಯಾಗಿದ್ದರು.ಗುಪ್ತಚರ ಇಲಾಖೆಯ ಡಿಐಜಿ ಆಗಿ ಕಾರ್ಯನಿರ್ವಹಿಸಿದ್ದರು. ಆಂಧ್ರಪ್ರದೇಶದ ಗುಂಟೂರು ಮೂಲದ ಸುಧೀರ್ ಕುಮಾರ್ ರೆಡ್ಡಿ 2017-18ರಲ್ಲಿ ದ.ಕ.ಜಿಲ್ಲಾ ಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದರು.

ನನಗೆ ಗೊತ್ತಿರುವುದು ಒಂದೇ ‘ಅದು ಕಾನೂನು’. ಅದರಲ್ಲಿ ಒಬ್ಬರಿಗೆ ಒಂದು ರೀತಿ, ಇನ್ನೊಬ್ಬರಿಗೆ ಇನ್ನೊಂದು ರೀತಿ ಎಂದಿಲ್ಲ, ಅದು ಎಲ್ಲರಿಗೂ ಒಂದೇ ಎಂದು ನೂತನ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿದರು.

ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಶುಕ್ರವಾರ ಸಂಜೆ ನಿರ್ಗಮಿತ ಕಮಿಷನರ್ ಅನುಪಮ್ ಅಗ್ರವಾಲ್ ಅವರಿಂದ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.

ಈಗ ತಾನೇ ಅಧಿಕಾರ ವಹಿಸಿಕೊಂಡಿದ್ದೇನೆ. ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ಮೊದಲು ಮಾಡುತ್ತೇನೆ. ನಗರದ ಜನತೆಗೆ ಯಾವ ಅನುಮಾನವೂ ಬೇಡ. ಕಾನೂನು ಏನು ಹೇಳುತ್ತದೋ ಅದರ ಪ್ರಕಾರವೇ ನಾನು ನಡೆಯುವುದು. ಬೇರೇನೂ ನನಗೆ ಗೊತ್ತಿಲ್ಲ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…