Gl
ಕರಾವಳಿ

ಗೋವಂಶದ ಕುರ್ಬಾನಿಗೆ ತಡೆ ನೀಡಲು ಹಾಗೂ ಹಿಂಸಾತ್ಮಕ ಗೋಸಾಗಾಟ ತಡೆಯಲು ವಿಹಿಂಪ ಆಗ್ರಹ | ಕಾರ್ಯಕರ್ತರು, ಅವರ ಮನೆಯವರಿಗೆ ಹಿಂಸೆ ನೀಡುತ್ತಿರುವ ಪೊಲೀಸರ ಕ್ರಮಕ್ಕೆ ಖಂಡನೆ

ಪುತ್ತೂರು: ಬಕ್ರೀದ್ ಮತ್ತಿತರ ಸಂದರ್ಭದಲ್ಲಿ ಗೋವಿನ ಕುರ್ಬಾನಿ ಆಗದಂತೆ ತಡೆಯಲು ಹಾಗೂ ಹಿಂಸಾತ್ಮಕವಾಗಿ ಗೋವನ್ನು ಸಾಗಾಟ ಮಾಡುವುದನ್ನು ತಡೆಯಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಇದೇ ರೀತಿ ಕಾರ್ಯಕರ್ತರ ಮನೆಗಳಿಗೆ ತೆರಳುವ ಪೊಲೀಸರು, ಸೆಲ್ಫಿ ತೆಗೆದು ಗಾಬರಿ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಇದು ಮನೆಯವರಿಗೂ ವೃಥಾ ತೊಂದರೆ ನೀಡುವ ಉದ್ದೇಶ. ಮುಂದೆ ಇದರಿಂದ ಸಮಸ್ಯೆಗಳಾದರೆ ಇಲಾಖೆಯೇ ಇದಕ್ಕೆ ಹೊಣೆ ಎಂದು ವಿಹಿಂಪ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಹೇಳಿದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಬಕ್ರೀದ್ ಮತ್ತಿತರ ಸಂದರ್ಭದಲ್ಲಿ ಗೋವಿನ ಕುರ್ಬಾನಿ ಆಗದಂತೆ ತಡೆಯಲು ಹಾಗೂ ಹಿಂಸಾತ್ಮಕವಾಗಿ ಗೋವನ್ನು ಸಾಗಾಟ ಮಾಡುವುದನ್ನು ತಡೆಯಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

Pashupathi

ಇದೇ ರೀತಿ ಕಾರ್ಯಕರ್ತರ ಮನೆಗಳಿಗೆ ತೆರಳುವ ಪೊಲೀಸರು, ಸೆಲ್ಫಿ ತೆಗೆದು ಗಾಬರಿ ತೆಗೆಯುವ ಕೆಲಸ ಮಾಡುತ್ತಿದ್ದಾರೆ. ಇದು ಮನೆಯವರಿಗೂ ವೃಥಾ ತೊಂದರೆ ನೀಡುವ ಉದ್ದೇಶ. ಮುಂದೆ ಇದರಿಂದ ಸಮಸ್ಯೆಗಳಾದರೆ ಇಲಾಖೆಯೇ ಇದಕ್ಕೆ ಹೊಣೆ ಎಂದು ವಿಹಿಂಪ ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ ಹೇಳಿದರು.

akshaya college

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಧ್ಯರಾತ್ರಿ ಮನೆಗೆ ಆಗಮಿಸುವ ಪೊಲೀಸರು, ಮನೆಯಿಂದ ಹೊರಗೆ ಕರೆದು ಸೆಲ್ಫಿ ತೆಗೆಯುತ್ತಿದ್ದಾರೆ. ಕಾನೂನು ಪ್ರಕಾರ, ಈ ರೀತಿ ಮನೆಗಳಿಗೆ ತೆರಳಿ ಸೆಲ್ಫಿ ತೆಗೆಯುತ್ತಿದ್ದಾರೆ. ಇದು ಎಷ್ಟರಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.

ರಾಜ್ಯ ಮತ್ತು ದೇಶದ ಕಾನೂನಿನನ್ವಯ ಹಾಗೂ Animal welfare board of India ಇದರ ಸುತ್ತೋಲೆ ಅನ್ವಯ ಹಾಗೆಯೇ ಸುಪ್ರೀಂ ಕೋರ್ಟ್ ಆದೇಶದನ್ವಯ ಬಕ್ರೀದ್ ಮತ್ತಿತರ ಹಬ್ಬ ಸಂಧರ್ಭಗಳಲ್ಲಿ, ಜಾನುವಾರು ಮತ್ತು ಇತರೆ ಪ್ರಾಣಿಗಳ ಹತ್ಯೆ ನಿಷೇಧವಿದ್ದು ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲು ಕ್ರಮ ಕೈಗೊಳ್ಳಲು ಮನವಿ ಮಾಡುತ್ತೇವೆ ಎಂದರು.

ರಾಜ್ಯದಲ್ಲಿ ಕರ್ನಾಟಕ ರಾಜ್ಯ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಕುರ್ಬಾನಿಗೆ (ಯಾವುದೇ ರೀತಿಯ ಹತ್ಯೆ) ನಿಷೇಧವಿದೆ. ಹಾಗೂ ಕುರ್ಬಾನಿಗೆ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧವಾಗಿದೆ. ಕುರ್ಬಾನಿ ಕೊಟ್ಟ ಸ್ಥಳವನ್ನು ಸರಕಾರ ಮುಟ್ಟುಗೋಲು ಮಾಡಲು ಅವಕಾಶವಿದೆ. ರಾಜ್ಯದಲ್ಲಿ ಪ್ರಾಣಿ ಬಲಿ ನಿಷೇಧ ಕಾಯಿದೆ 1959 ತಿದ್ದುಪಡಿ 1975 ಇದರ ಪ್ರಕಾರವೂ ಜಾನುವಾರು ಬಲಿ (ಕುರ್ಬಾನಿ ) ನಿಷೇಧವಿರುತ್ತದೆ ಎಂದರು.

ಸುಪ್ರೀಂ ಕೋರ್ಟ್ WP ( Civil ) 309:2003 ದಿನಾಂಕ 30.01.2014 ರ ತೀರ್ಪಿನ ಆದೇಶ ದಿನಾಂಕ 06.01.2009 WP 1443 / 2008 ಹಾಗೂ ಕಾಲ ಕಾಲಕ್ಕೆ ಸರಕಾರ ವಿವಿಧ ಆದೇಶಗಳಂತೆ ರಾಜ್ಯದಲ್ಲಿ ಜಾನುವಾರುಗಳ ಕುರ್ಬಾನಿ ಕಟ್ಟು ನಿಟ್ಟಾಗಿ ತಡೆಯಲು ತಾವುಗಳು ಕ್ರಮಕೈಗೊಳ್ಳುವಂತೆ ನಾವು ಮನವಿ ಮಾಡುತ್ತಿದ್ದೇವೆ ಎಂದರು.

ತಮ್ಮ ವ್ಯಾಪ್ತಿಯಲ್ಲಿ ಯಾವುದೇ ಅಕ್ರಮ ಜಾನುವಾರ ಸಾಗಾಟವಾಗದಂತೆ ನಾಕಾಬಂದಿ ಹಾಕಬೇಕು. ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸೂರ್ಯಾಸ್ತದಿಂದ ಸೂರ್ಯೋದಯವರೆಗೆ ಕಾಲ್ನಡಿಗೆಯಲ್ಲಿ ಜಾನುವಾರು ಸಾಗಾಟ ನಿಷೇಧವಿದ್ದು ಹಾಗಾಗಿ ಈ ಸಮಯದಲ್ಲಿ ಸಾಗಾಟ ಮಾಡದಂತೆ ಸಾರ್ವಜನಿಕರಿಗೆ ಎಚ್ಚರಿಕೆಯನ್ನು ಮಾಧ್ಯಮದ ಮೂಲಕ ಪ್ರಚಾರ ಮಾಡಬೇಕು. ಅದನ್ನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಶೇಖರಿಸಿಟ್ಟ, ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020 ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಿಂದೆ ನಡೆದ ಅಕ್ರಮ ಕಸಾಯಿಖಾನೆ ಜಾಗಗಳನ್ನು ನಿಗಾ ಇಡುತ್ತಾ, ಪ್ರಾರ್ಥನಾ ಮಂದಿರಗಳಲ್ಲಿಯೂ ಜಾನುವಾರು ಶೇಖರಿಸಿ ಇಡದಂತೆ ನಿಗಾ ಇಡಲು ಸೂಚಿಸಬೇಕು ಎಂದರು.

ಕಾಯಿದೆಯಂತೆ ಜಾನುವಾರು ಹತ್ಯೆ ತಡೆಯುವ ಅಧಿಕಾರ ಸಾರ್ವಜನಿಕರಿಗೂ ಇದ್ದು ಮೊದಲೇ ಪೊಲೀಸರು ಅಕ್ರಮ ಜಾನುವಾರು ಸಾಗಾಟ, ಶೇಖರಣೆ, ಹತ್ಯೆ ತಡೆಯಲು ಸಾರ್ವಜನಿಕರು ಅಧಿಕಾರ ಉಪಯೋಗಿಸಲು ಅವಕಾಶ ಸಿಗದಂತೆ ಎಚ್ಚರ ವಹಿಸಬೇಕು. ಈ ಎಲ್ಲಾ ಕಾರ್ಯಗಳಲ್ಲಿ ಕಾನೂನುಭದ್ಧವಾಗಿ ತಮಗೆ ಸಹಕರಿಸಲು ನಾವುಗಳು ಸದಾ ಸಿದ್ಧರಿದ್ದೇವೆ ಎಂದರು.

ಕಾರ್ಯದರ್ಶಿ ನವೀನ್ ನೆರಿಯ ಮಾತನಾಡಿ, ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅವರ ಆದೇಶದಂತೆ ಮನೆಗಳಿಗೆ ತೆರಳುತ್ತಿದ್ದಾರೆ. ಇದರಿಂದ ಏನಾದರೂ ಅನಾಹುತಗಳಾದರೆ ಅದಕ್ಕೆ ಪೊಲೀಸ್ ಇಲಾಖೆಯೇ ನೇರ ಹೊಣೆ ಎಂದರು.

ಕೋಶಾಧಿಕಾರಿ ಮಾಧವ ಪೂಜಾರಿ ಮಾತನಾಡಿ, ಕಾನೂನಿನಡಿ ಈ ರೀತಿ ಮನೆಗಳಿಗೆ ತೆರಳಲು ಅವಕಾಶ ಇಲ್ಲ. ಹಾಗೊಂದು ವೇಳೆ ಸಂದೇಹಗಳಿದ್ದರೆ ನೋಟಿಸ್ ನೀಡಿ ಕರೆಯಲಿ. ಇದನ್ನು ಹೈಕೋರ್ಟಿನಲ್ಲಿ ಪಿಐಎಲ್ ಹಾಕಿ ಪ್ರಶ್ನಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ಬಜರಂಗದಳ ಸಹಸಂಯೋಜಕ್ ಸಂತೋಷ್ ಉಪ್ಪಿನಂಗಡಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…