ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರನ್ನು ಗಡಿಪಾರು ಮಾಡಲು ಆಡಳಿತ ಸಿದ್ಧವಾಗಿದ್ದು, ವಿಚಾರಣೆಗೆ ದಿನ ನಿಗದಿ ಪಡಿಸಿದೆ.
ಅರುಣ್ ಕುಮಾರ್ ಪುತ್ತಿಲ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ಜೂನ್ 06ರಂದು ನಿಗದಿಪಡಿಸಿದ್ದು, ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ.
ಈ ಪ್ರಕರಣದಲ್ಲಿ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಪ್ರಕರಣದಲ್ಲಿ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ರಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.