ಕರಾವಳಿ

ಮಳೆ ಅವಾಂತರ: ನಾಳೆಯೂ (ಜು. 25) ದಕ್ಷಿಣ ಕನ್ನಡದ ಶಾಲಾ, ಕಾಲೇಜುಗಳಿಗೆ ರಜೆ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಬಳಿಕ ಮುಂಜಾಗ್ರತಾ ಕ್ರಮವಾಗಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ.

chennai-shopping
maithri

ಕಳೆದ 24 ಗಂಟೆಗಳಲ್ಲಿ ನಿರಂತರ ಭಾರಿ ಮಳೆಯಾಗಿದ್ದು, ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದಾಗಿ ಸೂಚಿಸಿದೆ.

ಜಿಲ್ಲಾ ಆಡಳಿತ ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರಕಟಿಸಿದ ತುರ್ತು ಕ್ರಮಗಳು ಹೀಗಿವೆ:

📌 ಜುಲೈ 25 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ, ಪಿಯು ಕಾಲೇಜುಗಳು ಹಾಗೂ ಖಾಸಗಿ-ಸರ್ಕಾರಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ

📌 ನದಿ, ಕೆರೆ, ಸಮುದ್ರ ತೀರಗಳಿಗೆ ಮಕ್ಕಳು ಅಥವಾ ಸಾರ್ವಜನಿಕರು ಹೋಗದಂತೆ ಪೋಷಕರು ಮತ್ತು ಸಾರ್ವಜನಿಕರಿಗೆ ಎಚ್ಚರಿಕೆ

📌 ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ

📌 ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರದಲ್ಲೇ ಇರುತ್ತಂತೆ ಆದೇಶ

📌 ನೋಡಲ್ ಅಧಿಕಾರಿಗಳು ಜಾಗೃತರಾಗಿ ಸಾರ್ವಜನಿಕ ದೂರುಗಳಿಗೆ ಸ್ಪಂದನೆ ನೀಡುವುದು, ಹಾಗೂ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು

📌 ಪ್ರವಾಸಿಗರಿಗೆ ನದಿತೀರ, ಸಮುದ್ರತೀರದ ಕಡೆಗೆ ಪ್ರವೇಶಕ್ಕೆ ನಿರ್ಬಂಧ

📌 ಪ್ರತೀ ತಾಲೂಕಿನಲ್ಲಿ ಕಾಳಜಿ ಕೇಂದ್ರ ತೆರೆಯಲು ಸಂಬಂಧಿತ ಇಲಾಖೆಗೆ ಸೂಚನೆ

🔸 ಯಾವುದೇ ತುರ್ತು ಪರಿಸ್ಥಿತಿಗೆ ಟೋಲ್ ಫ್ರೀ 1077 ಅಥವಾ 0824-2442590 ಸಂಪರ್ಕಿಸಿ.

ಭದ್ರತೆಗಾಗಿ ಇವು ಎಲ್ಲಾ ನಾಗರಿಕರು ಪಾಲಿಸಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳು ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts