ಕರಾವಳಿ

ಮಳೆ ಅವಾಂತರ: ನಾಳೆಯೂ (ಜು. 25) ದಕ್ಷಿಣ ಕನ್ನಡದ ಶಾಲಾ, ಕಾಲೇಜುಗಳಿಗೆ ರಜೆ!!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಬಳಿಕ ಮುಂಜಾಗ್ರತಾ ಕ್ರಮವಾಗಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ.

core technologies

ಕಳೆದ 24 ಗಂಟೆಗಳಲ್ಲಿ ನಿರಂತರ ಭಾರಿ ಮಳೆಯಾಗಿದ್ದು, ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದಾಗಿ ಸೂಚಿಸಿದೆ.

akshaya college

ಜಿಲ್ಲಾ ಆಡಳಿತ ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರಕಟಿಸಿದ ತುರ್ತು ಕ್ರಮಗಳು ಹೀಗಿವೆ:

📌 ಜುಲೈ 25 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ, ಪಿಯು ಕಾಲೇಜುಗಳು ಹಾಗೂ ಖಾಸಗಿ-ಸರ್ಕಾರಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ

📌 ನದಿ, ಕೆರೆ, ಸಮುದ್ರ ತೀರಗಳಿಗೆ ಮಕ್ಕಳು ಅಥವಾ ಸಾರ್ವಜನಿಕರು ಹೋಗದಂತೆ ಪೋಷಕರು ಮತ್ತು ಸಾರ್ವಜನಿಕರಿಗೆ ಎಚ್ಚರಿಕೆ

📌 ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ

📌 ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರದಲ್ಲೇ ಇರುತ್ತಂತೆ ಆದೇಶ

📌 ನೋಡಲ್ ಅಧಿಕಾರಿಗಳು ಜಾಗೃತರಾಗಿ ಸಾರ್ವಜನಿಕ ದೂರುಗಳಿಗೆ ಸ್ಪಂದನೆ ನೀಡುವುದು, ಹಾಗೂ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು

📌 ಪ್ರವಾಸಿಗರಿಗೆ ನದಿತೀರ, ಸಮುದ್ರತೀರದ ಕಡೆಗೆ ಪ್ರವೇಶಕ್ಕೆ ನಿರ್ಬಂಧ

📌 ಪ್ರತೀ ತಾಲೂಕಿನಲ್ಲಿ ಕಾಳಜಿ ಕೇಂದ್ರ ತೆರೆಯಲು ಸಂಬಂಧಿತ ಇಲಾಖೆಗೆ ಸೂಚನೆ

🔸 ಯಾವುದೇ ತುರ್ತು ಪರಿಸ್ಥಿತಿಗೆ ಟೋಲ್ ಫ್ರೀ 1077 ಅಥವಾ 0824-2442590 ಸಂಪರ್ಕಿಸಿ.

ಭದ್ರತೆಗಾಗಿ ಇವು ಎಲ್ಲಾ ನಾಗರಿಕರು ಪಾಲಿಸಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳು ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಮಯಕ್ಕೆ ಸರಿಯಾಗಿ ಬನ್ನಿರೆಂದ ಡಾ. ಮೋಹನ್ ಆಳ್ವ! ‘ನೀವು ಒಮ್ಮೆ ಚುನಾವಣೆಗೆ ನಿಲ್ಲಿ’ರೆಂದ ಶಾಸಕ ಅಶೋಕ್ ರೈ

ಪುತ್ತೂರು: ಭಾನುವಾರ ಸಂಜೆ 5.45ಕ್ಕೆ ಸರಿಯಾಗಿ ಆಳ್ವಾಸ್ ಸಾಂಸ್ಕೃತಿಕ ವೈಭವ ಶುರುವಾಗಲಿದೆ. ಈ…

ನ. 16ರಂದು ಪುತ್ತೂರಿನಲ್ಲಿ ಅನಾವರಣಗೊಳ್ಳಲಿದೆ 350 ವಿದ್ಯಾರ್ಥಿಗಳ ಕಲಾಪ್ರದರ್ಶನ ‘ಆಳ್ವಾಸ್ ಸಾಂಸ್ಕೃತಿಕ ವೈಭವ’’

ಪುತ್ತೂರು: ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಆಳ್ವಾಸ್ ನುಡಿಸಿರಿ…

ನ. 19: ಪುತ್ತೂರಿನಲ್ಲಿ ‘ಅಟಲ್ ವಿರಾಸತ್’ ಬೃಹತ್ ಸಮಾವೇಶ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ

ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ…

ವೈದ್ಯಕೀಯ ವಿದ್ಯಾರ್ಥಿಗಳಿಂದ ಡ್ರಗ್ಸ್ ಪೆಡ್ಲಿಂಗ್‌| ಮೊಹಮ್ಮದ್ ನಿಗಾರೀಸ್, ಶಕೀಬ್, ಸಬೀರ್ ಉಳ್ಳಾಲ ಪೊಲೀಸರ ವಶ!

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು…