tamanvi
ಕರಾವಳಿ

ಮಳೆ ಅವಾಂತರ: ನಾಳೆಯೂ (ಜು. 25) ದಕ್ಷಿಣ ಕನ್ನಡದ ಶಾಲಾ, ಕಾಲೇಜುಗಳಿಗೆ ರಜೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಬಳಿಕ ಮುಂಜಾಗ್ರತಾ ಕ್ರಮವಾಗಿ ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ.

ಕಳೆದ 24 ಗಂಟೆಗಳಲ್ಲಿ ನಿರಂತರ ಭಾರಿ ಮಳೆಯಾಗಿದ್ದು, ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದಾಗಿ ಸೂಚಿಸಿದೆ.

ಜಿಲ್ಲಾ ಆಡಳಿತ ಮತ್ತು ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರಕಟಿಸಿದ ತುರ್ತು ಕ್ರಮಗಳು ಹೀಗಿವೆ:

📌 ಜುಲೈ 25 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ, ಪಿಯು ಕಾಲೇಜುಗಳು ಹಾಗೂ ಖಾಸಗಿ-ಸರ್ಕಾರಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಣೆ

📌 ನದಿ, ಕೆರೆ, ಸಮುದ್ರ ತೀರಗಳಿಗೆ ಮಕ್ಕಳು ಅಥವಾ ಸಾರ್ವಜನಿಕರು ಹೋಗದಂತೆ ಪೋಷಕರು ಮತ್ತು ಸಾರ್ವಜನಿಕರಿಗೆ ಎಚ್ಚರಿಕೆ

📌 ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ

📌 ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರದಲ್ಲೇ ಇರುತ್ತಂತೆ ಆದೇಶ

📌 ನೋಡಲ್ ಅಧಿಕಾರಿಗಳು ಜಾಗೃತರಾಗಿ ಸಾರ್ವಜನಿಕ ದೂರುಗಳಿಗೆ ಸ್ಪಂದನೆ ನೀಡುವುದು, ಹಾಗೂ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು

📌 ಪ್ರವಾಸಿಗರಿಗೆ ನದಿತೀರ, ಸಮುದ್ರತೀರದ ಕಡೆಗೆ ಪ್ರವೇಶಕ್ಕೆ ನಿರ್ಬಂಧ

📌 ಪ್ರತೀ ತಾಲೂಕಿನಲ್ಲಿ ಕಾಳಜಿ ಕೇಂದ್ರ ತೆರೆಯಲು ಸಂಬಂಧಿತ ಇಲಾಖೆಗೆ ಸೂಚನೆ

🔸 ಯಾವುದೇ ತುರ್ತು ಪರಿಸ್ಥಿತಿಗೆ ಟೋಲ್ ಫ್ರೀ 1077 ಅಥವಾ 0824-2442590 ಸಂಪರ್ಕಿಸಿ.

ಭದ್ರತೆಗಾಗಿ ಇವು ಎಲ್ಲಾ ನಾಗರಿಕರು ಪಾಲಿಸಬೇಕಾದ ಅಗತ್ಯ ಮುಂಜಾಗ್ರತಾ ಕ್ರಮಗಳು ಎಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…