tamanvi
ಕರಾವಳಿ

ಆನೆ ಓಡಿಸುವ ಕಾರ್ಯಾಚರಣೆ: ದೇರ್ಲ, ಕೌಡಿಚ್ಚಾರು, ಮಾಡಾವು ರಸ್ತೆ ಬ್ಲಾಕ್!! ನಾಳೆಯೂ ಮುಂದುವರಿಯಲಿದೆ ಅರಣ್ಯ ಇಲಾಖೆ ಕಾರ್ಯಾಚರಣೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೆಯ್ಯೂರಿನ ದೇರ್ಲ ಭಾಗದಲ್ಲಿ ಹಾವಳಿ ನೀಡುತ್ತಿದ್ದ ಕಾಡಾನೆಯನ್ನು ಓಡಿಸುವ ಕಾರ್ಯಾಚರಣೆ ಗುರುವಾರ ಅರಣ್ಯ ಇಲಾಖೆ ನಡೆಸುತ್ತಿದ್ದು, ಇದೀಗ ಆನೆಯನ್ನು ಇಳಂತಾಜೆ ಭಾಗದ ಕಣಿಯೂರು ಮಲೆಯ ಕಡೆ ಬೆಂಬತ್ತಲಾಗಿದೆ.

ಕಾಡಾನೆ ಇದೀಗ ಕಣಿಯಾರು ಮಲೆಯಲ್ಲಿ ಇರುವ ಮಾಹಿತಿ ಇದ್ದು, ಅರಣ್ಯ ಇಲಾಖೆ ಸಿಬ್ಬಂದಿ ಟ್ರಾಕ್ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹಾಗಾಗಿ ಕಣಿಯಾರು ಮಲೆಯನ್ನು ಸಂಪರ್ಕಿಸುವ ದೇರ್ಲ, ಮಾಡಾವು, ಕೌಡಿಚ್ಚಾರು ಮೊದಲಾದ ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಎಸಿಎಫ್ ಸುಬ್ಬಯ್ಯ ನಾಯ್ಕ್ ತಿಳಿಸಿದ್ದಾರೆ.

ಬೆಳಗ್ಗಿನಿಂದಲೇ ದೇರ್ಲ ಭಾಗದಲ್ಲಿ ಕಾಡಾನೆ ಹಾವಳಿ ನಡೆಸುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯರ ಸಹಕಾರ‌ ಪಡೆದುಕೊಂಡ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಮುಂದಾಯಿತು.

ವಾಹನದಲ್ಲಿ ಅನೌನ್ಸ್ ಮಾಡುತ್ತಾ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಇನ್ನೊಂದೆಡೆ ಅರಣ್ಯ ಇಲಾಖೆಯ ತಜ್ಞ ತಂಡ ಆನೆಯನ್ನು ಬೆಂಬತ್ತುವ ಕಾರ್ಯದಲ್ಲಿ ನಿರತವಾಯಿತು. ಗರ್ನಲ್ ಸಿಡಿಸುತ್ತಾ ಆನೆಯನ್ನು ಓಡಿಸಲಾಯಿತು ಎಂದು ಎಸಿಎಫ್ ಸುಬ್ಬಯ್ಯ ನಾಯ್ಕ್ ಮಾಹಿತಿ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…