tamanvi
ಕರಾವಳಿ

ಆನೆ ಓಡಿಸುವ ಕಾರ್ಯಾಚರಣೆ: ದೇರ್ಲ, ಕೌಡಿಚ್ಚಾರು, ಮಾಡಾವು ರಸ್ತೆ ಬ್ಲಾಕ್!! ನಾಳೆಯೂ ಮುಂದುವರಿಯಲಿದೆ ಅರಣ್ಯ ಇಲಾಖೆ ಕಾರ್ಯಾಚರಣೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕೆಯ್ಯೂರಿನ ದೇರ್ಲ ಭಾಗದಲ್ಲಿ ಹಾವಳಿ ನೀಡುತ್ತಿದ್ದ ಕಾಡಾನೆಯನ್ನು ಓಡಿಸುವ ಕಾರ್ಯಾಚರಣೆ ಗುರುವಾರ ಅರಣ್ಯ ಇಲಾಖೆ ನಡೆಸುತ್ತಿದ್ದು, ಇದೀಗ ಆನೆಯನ್ನು ಇಳಂತಾಜೆ ಭಾಗದ ಕಣಿಯೂರು ಮಲೆಯ ಕಡೆ ಬೆಂಬತ್ತಲಾಗಿದೆ.

maithri

ಕಾಡಾನೆ ಇದೀಗ ಕಣಿಯಾರು ಮಲೆಯಲ್ಲಿ ಇರುವ ಮಾಹಿತಿ ಇದ್ದು, ಅರಣ್ಯ ಇಲಾಖೆ ಸಿಬ್ಬಂದಿ ಟ್ರಾಕ್ ಮಾಡುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹಾಗಾಗಿ ಕಣಿಯಾರು ಮಲೆಯನ್ನು ಸಂಪರ್ಕಿಸುವ ದೇರ್ಲ, ಮಾಡಾವು, ಕೌಡಿಚ್ಚಾರು ಮೊದಲಾದ ರಸ್ತೆಗಳನ್ನು ಬ್ಲಾಕ್ ಮಾಡಲಾಗಿದೆ ಎಂದು ಎಸಿಎಫ್ ಸುಬ್ಬಯ್ಯ ನಾಯ್ಕ್ ತಿಳಿಸಿದ್ದಾರೆ.

ಬೆಳಗ್ಗಿನಿಂದಲೇ ದೇರ್ಲ ಭಾಗದಲ್ಲಿ ಕಾಡಾನೆ ಹಾವಳಿ ನಡೆಸುತ್ತಿತ್ತು. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್ ಹಾಗೂ ಸ್ಥಳೀಯರ ಸಹಕಾರ‌ ಪಡೆದುಕೊಂಡ ಅರಣ್ಯ ಇಲಾಖೆ ಕಾರ್ಯಾಚರಣೆಗೆ ಮುಂದಾಯಿತು.

ವಾಹನದಲ್ಲಿ ಅನೌನ್ಸ್ ಮಾಡುತ್ತಾ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಇನ್ನೊಂದೆಡೆ ಅರಣ್ಯ ಇಲಾಖೆಯ ತಜ್ಞ ತಂಡ ಆನೆಯನ್ನು ಬೆಂಬತ್ತುವ ಕಾರ್ಯದಲ್ಲಿ ನಿರತವಾಯಿತು. ಗರ್ನಲ್ ಸಿಡಿಸುತ್ತಾ ಆನೆಯನ್ನು ಓಡಿಸಲಾಯಿತು ಎಂದು ಎಸಿಎಫ್ ಸುಬ್ಬಯ್ಯ ನಾಯ್ಕ್ ಮಾಹಿತಿ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…