tamanvi
ಕರಾವಳಿ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿ ಬರ್ಖಾಸ್ತು!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪರಶುರಾಮ ಥೀಮ್ ಪಾರ್ಕ್ ನಲ್ಲಿ ಸ್ಥಾಪಿತ ಪರಶುರಾಮನ ಪ್ರತಿಮೆಗೆ ಸಂಬಂಧಿಸಿದ ಕಾಂಗ್ರೆಸ್ ಮುಖಂಡ ಉದಯ ಕುಮಾರ್ ಶೆಟ್ಟಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ಸೂಚಿಸಿ ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಸಮಿತಿ ಪ್ರಕಟನೆ ಹೊರಡಿಸಿದೆ.

maithri

ಪರಶುರಾಮ ಪ್ರತಿಮೆಯ ಪುನರ್ ನಿರ್ಮಾಣಕ್ಕೆ ಸಂಬಂಧಿಸಿ ಉದಯ ಕುಮಾರ್ ಶೆಟ್ಟಿ ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಬೆಂಬಲವಾಗಿ ಈ ಕ್ರಮಕ್ಕೆ ಬರಲಾಗಿದೆ ಎಂದು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಕೃಷ್ಣ ಶೆಟ್ಟಿ ಬಜಗೋಳಿ ತಿಳಿಸಿದ್ದಾರೆ.

ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ರಾಜಕೀಯೇತರ ಸಮಿತಿಯಾಗಿದ್ದು, ಬೈಲೂರಿನ ಉಮಿಕ್ಕಲ್ ಬೆಟ್ಟದಲ್ಲಿ ಕಂಚಿನ ಪರಶುರಾಮ ಮೂರ್ತಿಯನ್ನು ಪುನರ್ ಸ್ಥಾಪಿಸುವ ಧಾರ್ಮಿಕ ಶ್ರದ್ಧೆಯ ಸದುದ್ದೇಶವನ್ನು ಹೊಂದಿ ಅಸ್ತಿತ್ವಕ್ಕೆ ಬಂದಿರುತ್ತದೆ.

ಇದೀಗ ಕಾರ್ಕಳದ ಕಾಂಗ್ರೆಸ್ ನ ಹಿರಿಯ ನಾಯಕ ಉದಯ ಕುಮಾರ್ ಶೆಟ್ಟಿ ನಮ್ಮ ಸಮಿತಿಯು ಹೊಂದಿದ್ದ ಸದುದ್ದೇಶವನ್ನೇ ಇಟ್ಟುಕೊಂಡು ಉಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂಧರ್ಭ ನಮ್ಮ ಸಮಿತಿಯು ಯಾವುದೇ ನಿರ್ಣಯವನ್ನು ಕೈಗೊಂಡರೂ ಕಾನೂನಿನ ತೊಡಕಾಗುವ ಸಾಧ್ಯತೆ ಇದೆ. ಈ ಕಾರಣಕ್ಕೆ ಉದಯ್ ಕುಮಾರ್ ಶೆಟ್ಟಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಪೂರ್ಣವಾಗಿ ಬೆಂಬಲ ನೀಡುವ ಉದ್ದೇಶದಿಂದ ಈ ಸಮಿತಿಯನ್ನು ಬರ್ಖಾಸ್ತುಗೊಳಿಸುವ ನಿರ್ಣಯವನ್ನು ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ಹಿತರಕ್ಷಣಾ ಸಮಿತಿಯು ಸಭೆ ಸೇರಿ ತೆಗೆದುಕೊಂಡಿದೆ ಎಂದು ಕೃಷ್ಣ ಶೆಟ್ಟಿ ಬಜಗೋಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…