tamanvi
ಕರಾವಳಿ

ನಾರಾಯಣ ಗುರುಗಳ ಅಪಹಾಸ್ಯ ಮಾಡಲು ಮಹಮ್ಮದಾಲಿ ಯಾರು? ವಿಶ್ವಗುರುವಿನ ನಿಂದನೆ ಹಿಂದೆ ಷಡ್ಯಂತ್ರವಿದೆ: ಬಿಜೆಪಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಧರ್ಮಸ್ಥಳದ ವಿಚಾರದಲ್ಲಿ ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ್ದ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ಅವರು ವಿಶ್ವಗುರು ನಾರಾಯಣ ಗುರು ಅವರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಆಪಾದಿಸಿದರು.

maithri

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿವಾದಕ್ಕೆ ನಾರಾಯಣ ಗುರುಗಳನ್ನು ಎಳೆದು ತರುವ ಅಗತ್ಯ ಇರಲಿಲ್ಲ. ವಿಶ್ವ ಗುರು, ಮೊದಲ ಬಾರಿಗೆ ವಿಶ್ವಧರ್ಮ ಸಮ್ಮೇಳನ ನಡೆಸಿದ್ದ ನಾರಾಯಣ ಗುರುಗಳನ್ನು ಅವಮಾನಿಸಿದ್ದ ಮಹಮ್ಮದಾಲಿ ಯಾರು? ಇದು ಷಡ್ಯಂತ್ರದ ಒಂದು ಭಾಗ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ಅಲಿಗೇನು ಗೊತ್ತು ಆಲದ ಮರದ ಆಳ – ಅಗಲ. ಮಹಮ್ಮದಾಲಿ ಅವರನ್ನು‌ ಪಕ್ಷ ಎಲ್ಲಿಟ್ಟಿದೆ ಎನ್ನುವುದು ನಮಗೆ ತಿಳಿದಿದೆ. ಅಧಿಕಾರ ಇರುವಾಗ ಜನಾರ್ದನ ಪೂಜಾರಿ ಅವರ ಕಾಲು ಹಿಡಿದಿದ್ದ ಆಲಿ ಅವರು, ಇದೀಗ ದೂರುತ್ತಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾ ಶಿವಕುಮಾರ್, ಪುರುಷೋತ್ತಮ್ ಮುಂಗ್ಲಿಮನೆ, ಸುಂದರ್ ಪೂಜಾರಿ ಬಡಾವು, ನಿರಂಜನ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…