tamanvi
ಕರಾವಳಿ

ನಾರಾಯಣ ಗುರುಗಳ ಅಪಹಾಸ್ಯ ಮಾಡಲು ಮಹಮ್ಮದಾಲಿ ಯಾರು? ವಿಶ್ವಗುರುವಿನ ನಿಂದನೆ ಹಿಂದೆ ಷಡ್ಯಂತ್ರವಿದೆ: ಬಿಜೆಪಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಧರ್ಮಸ್ಥಳದ ವಿಚಾರದಲ್ಲಿ ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಉಲ್ಲೇಖಿಸಿ ಮಾತನಾಡಿದ್ದ ಪುತ್ತೂರು ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ಅವರು ವಿಶ್ವಗುರು ನಾರಾಯಣ ಗುರು ಅವರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್ ಆಪಾದಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವಿವಾದಕ್ಕೆ ನಾರಾಯಣ ಗುರುಗಳನ್ನು ಎಳೆದು ತರುವ ಅಗತ್ಯ ಇರಲಿಲ್ಲ. ವಿಶ್ವ ಗುರು, ಮೊದಲ ಬಾರಿಗೆ ವಿಶ್ವಧರ್ಮ ಸಮ್ಮೇಳನ ನಡೆಸಿದ್ದ ನಾರಾಯಣ ಗುರುಗಳನ್ನು ಅವಮಾನಿಸಿದ್ದ ಮಹಮ್ಮದಾಲಿ ಯಾರು? ಇದು ಷಡ್ಯಂತ್ರದ ಒಂದು ಭಾಗ. ಇದನ್ನು ಬಿಜೆಪಿ ಖಂಡಿಸುತ್ತದೆ ಎಂದರು.

ಅಲಿಗೇನು ಗೊತ್ತು ಆಲದ ಮರದ ಆಳ – ಅಗಲ. ಮಹಮ್ಮದಾಲಿ ಅವರನ್ನು‌ ಪಕ್ಷ ಎಲ್ಲಿಟ್ಟಿದೆ ಎನ್ನುವುದು ನಮಗೆ ತಿಳಿದಿದೆ. ಅಧಿಕಾರ ಇರುವಾಗ ಜನಾರ್ದನ ಪೂಜಾರಿ ಅವರ ಕಾಲು ಹಿಡಿದಿದ್ದ ಆಲಿ ಅವರು, ಇದೀಗ ದೂರುತ್ತಿದ್ದಾರೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾ ಶಿವಕುಮಾರ್, ಪುರುಷೋತ್ತಮ್ ಮುಂಗ್ಲಿಮನೆ, ಸುಂದರ್ ಪೂಜಾರಿ ಬಡಾವು, ನಿರಂಜನ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…