ಪುತ್ತೂರು: ದರ್ಬೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ, ವಿದ್ಯಾನಿಧಿ – ಸಹಾಯಧನ ವಿತರಣಾ ಸಮಾರಂಭ ಸೆ. 13ರಂದು ದರ್ಬೆ ಪ್ರಶಾಂತ್ ಮಹಲ್ ಸನ್ನಿಧಿ ಹಾಲಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಉಪಾಧ್ಯಕ್ಷ ಅಶ್ವಿನ್ ಎಲ್. ಶೆಟ್ಟಿ ಹೇಳಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪುತ್ತೂರಿನಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘವು 23 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ತನ್ನ ಸೇವೆಯನ್ನು ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ ಮತ್ತು ಕಡಬ ತಾಲೂಕಿನಲ್ಲಿರುವ 15 ಶಾಖೆಗಳ ಮೂಲಕ ನೀಡಿಕೊಂಡು ಬರುತ್ತಿದ್ದು, 2024-25 ನೇ ಸಾಲಿನ ಆರ್ಥಿಕ ವರ್ಷದಲ್ಲಿ ತನ್ನ ಸಂಘದ ಸದಸ್ಯರ ಸಹಕಾರದಿಂದ ಅತ್ಯುತ್ತಮ ಕಾರ್ಯದಕ್ಷತೆಯನ್ನು ಸಾಧಿಸಿ, ಸಂಘವು 829.88 ಕೋಟಿ ರೂ. ಗಳ ದಾಖಲೆಯ ವ್ಯವಹಾರವನ್ನು ನಡೆಸಿ 2.01 ಕೋಟಿ ರೂ.ಗಳಷ್ಟು ಲಾಭವನ್ನು ಗಳಿಸಿರುತ್ತದೆ ಎಂದರು.
ಸಂಘದ 2024-25 ನೇ ಆರ್ಥಿಕ ಸಾಲಿನ ಅಂತ್ಯಕ್ಕೆ ಸಂಘದಲ್ಲಿ 8919 ಸದಸ್ಯರಿದ್ದು ಒಟ್ಟು 3.39 ಕೋಟಿ ರೂ. ಗಳಷ್ಟು ಪಾಲು ಬಂಡವಾಳವನ್ನು ಹೊಂದಿರುತ್ತದೆ. ಸಂಘವು 150.95 ಕೋಟಿ ರೂ. ಠೇವಣಿಯನ್ನು ಹೊಂದಿಕೊಂಡು, 133.64 ಕೋಟಿ ರೂ. ಗಳಷ್ಟು ಸಾಲಗಳನ್ನು ವಿತರಿಸಿದೆ. ಸಂಘವು 2.84 ಕೋಟಿ ರೂ. ಗಳಷ್ಟು ಕ್ಷೇಮ ನಿಧಿ, 3.79 ಕೋಟಿ ರೂ. ಗಳಷ್ಟು ಇತರ ನಿಧಿ ಮತ್ತು 161.04 ಕೋಟಿಗಳಷ್ಟು ದುಡಿಯುವ ಬಂಡವಾಳವನ್ನು ಹೊಂದಿರುತ್ತದೆ. ಸಂಘವು ಸ್ಥಾಪನೆಗೊಂಡ ವರ್ಷದಿಂದ ತನ್ನ ಸದಸ್ಯರಿಗೆ ಡಿವಿಡೆಂಡ್ ನೀಡಿಕೊಂಡು ಬರುತ್ತಿರುವ ಮತ್ತು ಆಡಿಟ್ ವರ್ಗದಲ್ಲಿ ಸತತವಾಗಿ “ಎ” ತರಗತಿಯನ್ನು ಬಂದಿರುವ ಏಕೈಕ ಸಂಘವಾಗಿರುತ್ತದೆ. ಕಳೆದ ವರ್ಷದ ಶೇ.16% ಡಿವಿಡೆಂಡನ್ನು ನೀಡಿರುತ್ತೇವೆ. 2024-25 ನೇ ಸಾಲಿನ ಡಿವಿಡೆಂಡನ್ನು ಶೇ.17% ರಂತೆ ನೀಡುವ ಬಗ್ಗೆ ಆಡಳಿತ ಮಂಡಳಿ ಸಭೆಯಲ್ಲಿ ಮಂಜೂರಾಗಿ ಮಹಾಸಭೆಗೆ ಶಿಫಾರಸ್ಸು ಮಾಡಲಾಗಿದೆ. ಸಂಘದ ಕೇಂದ್ರ ಕಚೇರಿಗೆ ಸ್ವಂತ ಕಟ್ಟಡದ ನಿರ್ಮಾಣವು ಪ್ರಗತಿ ಹಂತದಲ್ಲಿದ್ದು, ಸಂಘಕ್ಕೆ 25 ವರ್ಷ ಪೂರೈಸುವುದರೊಳಗೆ ಕಟ್ಟಡ ನಿರ್ಮಾಣದ ಕೆಲಸವನ್ನು ಪೂರ್ತಿಗೊಳಿಸಿ ಲೋಕಾರ್ಪಣೆಯನ್ನು ಮಾಡಲಾಗುವುದು. ಪ್ರಸ್ತುತ ವರ್ಷ ಮಂಗಳೂರಿನ ಪಾಂಡೇಶ್ವರದಲ್ಲಿ ಮತ್ತು ಪುತ್ತೂರಿನ ಈಶ್ವರಮಂಗಲದಲ್ಲಿ 16ನೇ ಮತ್ತು 17ನೇ ಶಾಖೆಗಳನ್ನು ಅತೀ ಶೀಘ್ರದಲ್ಲಿ ತೆರೆಯಲಾಗುವುದು. ಸಂಘದ ಪ್ರಗತಿ ಮತ್ತು ಸೇವೆಯನ್ನು ಪರಿಗಣಿಸಿ 2024-25 ನೇ ಸಾಲಿನಲ್ಲಿ ಸಂಘವು ತನ್ನ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದಕ್ಕೆ 30-08-2025 och ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ರವರು ದಿನಾಂಕ ನಡೆದ ತನ್ನ ವಾರ್ಷಿಕ ಮಹಾಸಭೆಯಲ್ಲಿ “ಸಾಧನ ಪ್ರಶಸ್ತಿ” ಯನ್ನು ನೀಡಿ ಗೌರವಿಸಿದೆ. ಸಂಘವು 6ನೇ ಸಲ ಈ ಪ್ರಶಸ್ತಿಗೆ ಬಾಜನವಾಗಿದೆ. ಕರ್ನಾಟಕ ಸರಕಾರವು ಅಖಿಲ ಭಾರತ ಸಹಕಾರಿ ಸಪ್ತಾಹದಲ್ಲಿ ಸಂಘಕ್ಕೆ 2 ಸಲ “ಉತ್ತಮ ವಿವಿಧೋದ್ದೇಶ ಸಹಕಾರಿ ಸಂಘ ಪ್ರಶಸ್ತಿ” ನೀಡಿ ಗೌರವಿಸಿದೆ. ಸಂಘದಲ್ಲಿ ಗ್ರಾಹಕರಿಗೆ ತ್ವರಿತ ಮತ್ತು ಪಾರದರ್ಶಕ ಸೇವೆಯನ್ನು ನೀಡುವ ಸಲುವಾಗಿ ನೆಫ್ಟ್, ಆರ್.ಟಿ.ಜಿ.ಎಸ್ ಸೌಲಭ್ಯ, ಎಸ್.ಎಂ.ಎಸ್ ಸೌಲಭ್ಯಗಳನ್ನು ಒದಗಿಸಲಾಗಿದೆ ಹಾಗೂ ಸದಸ್ಯರಿಗೆ ಸೋಲಾರ್ ವಾಟರ್ ಹೀಟರ್ ಮತ್ತು ಸೋಲಾರ್ ಲೈಟ್ ಅಳವಡಿಸಲು ಶೂನ್ಯ ಬಡ್ಡಿದರದಲ್ಲಿ ರೂ. 2,00,000/-ದ ತನಕ ಸಾಲವನ್ನು ವಿತರಿಸುತ್ತೇವೆ ಎಂದು ವಿವರಿಸಿದರು.
ನಿರ್ದೇಶಕರಾದ ಜೈರಾಜ್ ಭಂಡಾರಿ ನೋಣಾಲು ಮಾತನಾಡಿ, ಸಂಘವು ತನ್ನ ಸಾಮಾಜಿಕ ಕಾರ್ಯದ ಮೂಲಕ ಶಾಖೆಗಳ ವ್ಯಾಪ್ತಿಯಲ್ಲಿ ಬರುವ ಸರಕಾರಿ ಶಾಲೆಗಳಲ್ಲಿ 5 ರಿಂದ 10 ನೇ ತರಗತಿಯಲ್ಲಿ ಕಲಿಯುತ್ತಿರುವ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ತನ್ನ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನವನ್ನು ಮಹಾಸಭೆಯ ದಿನದಂದು ನೀಡಿಕೊಂಡು ಬರುತ್ತಿದ್ದು, ಈ ವರೆಗೆ ಒಟ್ಟು ರೂ.26,29,000/- ಮೊತ್ತವನ್ನು ಒಟ್ಟು 1295 ವಿದ್ಯಾರ್ಥಿಗಳಿಗೆ ವಿತರಿಸಿರುತ್ತೇವೆ. ಮಾತ್ರವಲ್ಲದೆ ಹಲವಾರು ಸಂಘ ಸಂಸ್ಥೆಗಳಿಗೆ ಆರ್ಥಿಕ ನೆರವನ್ನು ಕೂಡ ನೀಡಿರುತ್ತೇವೆ. ದಿನಾಂಕ 13-09-2025 ರಂದು ನಡೆಯುವ ಸಂಘದ 2024-25 ನೇ ಸಾಲಿನ ಮಹಾಸಭೆಯ ನಂತರ ನಡೆಯುವ ಸಮಾರಂಭದಲ್ಲಿ ಈ ವರ್ಷ 7 ಮತ್ತು 8ನೇ ತರಗತಿಯಲ್ಲಿ ಕಲಿಯುತ್ತಿರುವ 250 ಮಕ್ಕಳಿಗೆ ತಲಾ 2,000/- ರಂತೆ ವಿದ್ಯಾರ್ಥಿ ವೇತನವನ್ನು ಗಣ್ಯರ ಉಪಸ್ಥಿತಿಯಲ್ಲಿ ವಿತರಿಸಲಾಗುವುದು. ಈ ಸಮಾರಂಭದ ಉದ್ಘಾಟಣೆಯನ್ನು ಶ್ರೀ ಕೆ ಜೈರಾಜ್ ಬಿ ಕೈ ಅಧ್ಯಕ್ಷರು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಮಂಗಳೂರು ಇವರು ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಶಶಿಕುಮಾರ್ ರೈ ಬಾಳ್ಕೊಟ್ಟು, ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಸಂಘ ಮಂಗಳೂರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶ್ರೀ ಶಶಿಧರ್ ಜಿ ಎಸ್ ಉಪನಿರ್ದೇಶಕರು ಸಾರ್ವಜನಿಕ ಶಿಕ್ಷಣ ಇಲಾಖೆ ಮಂಗಳೂರು ದ.ಕ ಜಿಲ್ಲೆ, ಶ್ರೀ ಜಯರಾಮ ರೈ ಎ ಕೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಶ್ರೀ ಮಹಿಷಾ ಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನ ಕೆಯ್ಯರು ಇವರುಗಳು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷರಾದ ಎನ್. ಸುಂದರ್ ರೈ, ಮಹಾಪ್ರಬಂಧಕರಾದ ವಸಂತ ಜಾಲಾಡಿ, ಸಹಾಯಕ ಮಹಾಪ್ರಬಂಧಕರಾದ ಸುನಾದ್ ರಾಜ್ ಶೆಟ್ಟಿ ಉಪಸ್ಥಿತರಿದ್ದರು.