tamanvi
ಕರಾವಳಿ

ಮಾರ್ಕ್ ಟೆಲಿಕಾಂ ಮಾಲಕ ಶಶಿರಾಜ್ ರೈ ಅವರಿಗೆ ಪ್ರೇರಣಾ ಪ್ರಶಸ್ತಿ ಗೌರವ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೆಸಿಐ ಇಂಡಿಯಾ ವಲಯ 15ರ ಬೆಳವಣಿಗೆ ಮತ್ತು ಅಭಿವೃದ್ಧಿ ಸಮಾವೇಶದಲ್ಲಿ ಅತ್ಯುತ್ತಮ ತರಬೇತುದಾರರಿಗೆ ನೀಡುವ ಪ್ರೇರಣಾ ಪ್ರಶಸ್ತಿಯನ್ನು ಪುತ್ತೂರಿನ ಮಾರ್ಕ್ ಟೆಲಿಕಾಂ ಮಾಲಕ ಶಶಿರಾಜ್ ರೈ ಅವರಿಗೆ ನೀಡಿ ಗೌರವಿಸಲಾಯಿತು.

maithri

ಕಾರ್ಕಳದ ಹೋಟೆಲ್ ಬಾಲಾಜಿ ಇನ್’ನಲ್ಲಿ ಆ. 24ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಜೆಸಿಐ ವಲಯ 15ರ ವಲಯಾಧ್ಯಕ್ಷ ಅಭಿಲಾಷ್ ಬಿ.ಎ. ಗೌರವಿಸಿದರು.

ಜೆಸಿಐನಲ್ಲಿ ಅತ್ಯುತ್ತಮ ತರಬೇತುದಾರರಾಗಿ ನೂರಾರು ತರಬೇತಿ ನೀಡುತ್ತಾ ಬಂದಿರುವ ಶಶಿರಾಜ್ ರೈ ಅವರ ಸಾಧನೆಯನ್ನು ಗುರುತಿಸಿ, ಜೆಸಿಐ ಪುತ್ತೂರು ಘಟಕದಿಂದ ಪ್ರಶಸ್ತಿಗೆ ಹೆಸರು ಶಿಫಾರಸು ಮಾಡಲಾಗಿತ್ತು.

ಪುತ್ತೂರು ಮುಖ್ಯರಸ್ತೆಯಲ್ಲಿರುವ ಮಾರ್ಕ್ ಟೆಲಿಕಾಂ ಮಾಲಕರಾಗಿರುವ ಇವರು, ಪತ್ನಿ ಸ್ವಾತಿ ಎಸ್. ರೈ, ಮಕ್ಕಳಾದ ಸಹರ್ ಎಸ್. ರೈ ಹಾಗೂ ಸಿಯಾರ ಎಸ್. ರೈ ಅವರೊಂದಿಗೆ ಪುತ್ತೂರಿನಲ್ಲಿ ನೆಲೆಸಿದ್ದಾರೆ. ಇವರು ಜೆಸಿಐ ಪುತ್ತೂರು ಘಟಕದ ಪೂರ್ವಾಧ್ಯಕ್ಷ ಮುಂಡಾಲಗುತ್ತು ಮೋಹನ್ ರೈ ಮತ್ತು ಮುಂಡಾಲಗುತ್ತು ಕೃಷ್ಣಕುಮಾರಿ ಎಂ. ರೈ ದಂಪತಿ ಪುತ್ರ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…