ಕರಾವಳಿ

ಮಂಗಳೂರು- ಸುಬ್ರಹ್ಮಣ್ಯ ವಿದ್ಯುತ್ ಚಾಲಿತ ಪ್ಯಾಸೆಂಜ‌ರ್ ರೈಲು ಸಂಚಾರ ಸೆ.15ರಿಂದ!!

ಈ ಸುದ್ದಿಯನ್ನು ಶೇರ್ ಮಾಡಿ

ಕಾಣಿಯೂರು: ಮಂಗಳೂರು ಸೆಂಟ್ರಲ್- ಸುಬ್ರಹ್ಮಣ್ಯ ರೋಡ್ ನಿಲ್ದಾಣಗಳ ನಡುವಿನ ಹಳಿ ವಿದ್ಯುದೀಕರಣ ಯೋಜನೆ ಪೂರ್ಣಗೊಂಡಿದ್ದು, ಸೆ.15ರಿಂದ ರೈಲುಗಳು ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚರಿಸಲಿವೆ.

ಮುಂಜಾನೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಸುಬ್ರಹ್ಮಣ್ಯ ರೋಡ್ ತಲುಪುವ ಪ್ಯಾಸೆಂಜರ್ ರೈಲು ಅಲ್ಲಿಂದ ಮರಳಿ ಮಂಗಳೂರು ತಲುಪುತ್ತಿದೆ. ಇದೇ ರೈಲು ಸಂಜೆಯೂ ಇದೇ ರೀತಿ ಮಂಗಳೂರಿನಿಂದ ಸುಬ್ರಹ್ಮಣ್ಯ ರೋಡ್ ನಿಲ್ದಾಣಕ್ಕೆ ಬಂದು ರಾತ್ರಿ ಮಂಗಳೂರಿಗೆ ನಿರ್ಗಮಿಸುತ್ತದೆ.

ಇವೆರಡು ಸೇವೆಗಳಲ್ಲದೆ ಮಧ್ಯಾಹ್ನವೂ ಮಂಗಳೂರು ಸೆಂಟ್ರಲ್-ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲು ಸೇವೆಯಿದೆ. ಈ ಮೂರು ಸಮಯದ ರೈಲುಗಳು ಸೆ.15ರಿಂದ ವಿದ್ಯುತ್ ಚಾಲಿತ ಎಂಜಿನ್ ಮೂಲಕ ಸಂಚರಿಸಲಿವೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ರೈಲ್ವೆ ಇಲಾಖೆ ಮಾಡಿಕೊಂಡಿದೆ. ರೈಲು ಹಳಿಗಳ ಮೇಲ್ಬಾಗದಲ್ಲಿ ವಿದ್ಯುತ್‌ ತಂತಿಗಳನ್ನು ಜೋಡಿಸಲಾಗಿದ್ದು, ಇದಕ್ಕೆ ಎಂಜಿನ್ ಜತೆ ಸಂಪರ್ಕ ಕಲ್ಪಿಸಲಾಗುತ್ತದೆ. ಸೆ.10ರಂದು ವಿದ್ಯುತ್ ಚಾಲಿತ ಎಂಜಿನ್ ಮಂಗಳೂರು- ಸುಬ್ರಹ್ಮಣ್ಯ ರೋಡ್ ನಡುವೆ ಯಶಸ್ವಿ ಸಂಚಾರ ನಡೆಸಿತು. ಕಳೆದ ಜೂನ್‌ನಿಂದ ಸುಬ್ರಹ್ಮಣ್ಯ ರೋಡ್-ಎಡಕುಮೇರಿ- ಹಾಸನ ನಡುವಿನ ಹಳಿ ವಿದ್ಯುದೀಕರಣ ಕಾಮಗಾರಿ ನಡೆಯುತ್ತಿದ್ದು, ಇದು ಪೂರ್ಣಗೊಂಡ ಬಳಿಕ ಮಂಗಳೂರು-ಬೆಂಗಳೂರು ರೈಲುಗಳು ಕೂಡಾ ವಿದ್ಯುತ್ ಚಾಲಿತಗೊಳ್ಳಲಿವೆ. ಭವಿಷ್ಯದಲ್ಲಿ ಮಂಗಳೂರು- ಬೆಂಗಳೂರು ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಸೇವೆ ಆರಂಭಗೊಳ್ಳಲು ಇದು ಅವಕಾಶ ಮಾಡಿಕೊಡಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎರಡೇ ದಿನದಲ್ಲಿ ಬಯಲಾದ ರಸ್ತೆ ಕಾಮಗಾರಿಯ ಅಸಲಿ ಮುಖ | ಅವೈಜ್ಞಾನಿಕ, ಕಳಪೆ ರಸ್ತೆ ಕಾಮಗಾರಿ ವಿರುದ್ಧ ಪುತ್ತಿಲ ಆಕ್ರೋಶ

ಪುತ್ತೂರು: ಕಾಮಗಾರಿ ನಡೆದ ರಸ್ತೆ ವಾಹನ ಸಂಚಾರಕ್ಕೆ ತೆರೆದುಕೊಂಡ ಎರಡೇ ದಿನದಲ್ಲಿ ಕಿತ್ತು…

ಸೆ. 7 – 9: ಯುವಜನರ ನಡಿಗೆ ಉದ್ಯೋಗದ ಕಡೆಗೆ ಡಿವೈಎಫ್ಐನಿಂದ ಯುವಜನ ಜಾಥಾ | ಪುತ್ತೂರು ಸಹಿತ ಜಿಲ್ಲಾದ್ಯಂತ ಸಂಚರಿಸಲಿದೆ ಜಾಥಾ

ಪುತ್ತೂರು: ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಯುವಜನರ ನಡಿಗೆ ಉದ್ಯೋಗದ ಕಡೆಗೆ…

ಧರ್ಮಸ್ಥಳ: ನೂರಾರು ಶವಗಳ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ- ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ…