ಕರಾವಳಿ

ಮಂಗಳೂರು: ಹೊನ್ನೆಕಟ್ಟೆ-ಕಾನ ಮೇಲ್ಸೇತುವೆ  ಸೆ.17 ರಿಂದ30ರ ತನಕ ಸಂಚಾರ ನಿಷೇಧ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಹೊನ್ನೆಕಟ್ಟೆ-ಕಾನ ರೈಲ್ವೆ ಮೇಲ್ವೇತುವೆಯ ಮೇಲೆ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 16ರ ವರೆಗೆ 30 ದಿನಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

core technologies

ಸೇತುವೆಯ ಮೇಲೆ ಕಾಂಕ್ರೀಟಿಕರಣ ಕಾಮಗಾರಿ ನಡೆಯುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಅವಧಿಯಲ್ಲಿ ಈ ಕೆಳಗಿನಂತೆ ಸಂಚಾರ ಮಾರ್ಗಗಳನ್ನು ಬದಲಾಯಿಸಲಾಗಿದೆ:

akshaya college

ಕುಲಾಯಿ-ಹೊನ್ನೆಕಟ್ಟೆ ಮಾರ್ಗವಾಗಿ ಮಂಗಳೂರಿನಿಂದ ಎಂಆರ್‌ಪಿಎಲ್ (ಒಎನ್‌ಜಿಸಿ) ಕಡೆಗೆ ಸಂಚರಿಸುವ ವಾಹನಗಳು ಹೊಸಬೆಟ್ಟು-ಸುರತ್ಕಲ್ ಜಂಕ್ಷನ್ ಮಾರ್ಗವನ್ನು ಬಳಸಿಕೊಂಡು ಎಂಆರ್‌ಪಿಎಲ್ ತಲುಪಬೇಕು.

ಎಂಆರ್‌ಪಿಎಲ್‌ನಿಂದ ಮಂಗಳೂರು ಕಡೆಗೆ ಬರುವ ವಾಹನಗಳು ಎಂಆರ್‌ಪಿಎಲ್-ಸುರತ್ಕಲ್ ಜಂಕ್ಷನ್ ಮೂಲಕ ಸಂಚರಿಸಿ, ಎನ್‌ಹೆಚ್-66 ಸರ್ವೀಸ್ ರಸ್ತೆಯಾದ ಗೋವಿಂದಾಸ್ ಮೂಲಕ ಮಂಗಳೂರು ತಲುಪಬೇಕು.

ಸುರತ್ಕಲ್‌-ಗೋವಿಂದಾಸ್ ಸರ್ವೀಸ್ ರಸ್ತೆಯಲ್ಲಿ ವಾಹನಗಳ ನಿಲುಗಡೆಗೆ ನಿಷೇಧಿಸಲಾಗಿದೆ.

ಏಕಮುಖ ಸಂಚಾರಕ್ಕೆ ಅನುಕೂಲವಾಗುವಂತೆ ಗೋವಿಂದಾಸ್‌ನಿಂದ ಸುರತ್ಕಲ್ ಕಡೆಗೆ ಸುರತ್ಕಲ್-ಗೋವಿಂದಾಸ್ ಸರ್ವೀಸ್ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಗರಿಷ್ಠ ಸಂಚಾರದ ಅವಧಿಯಲ್ಲಿ (ಬೆಳಗ್ಗೆ 8 ರಿಂದ 9 ಮತ್ತು ಸಂಜೆ 4 ರಿಂದ 6) ಎಂಆರ್‌ಪಿಎಲ್, ಹೆಚ್‌ ಪಿಸಿಎಲ್, ಬಿಎಎಸ್‌ಎಫ್ ಮತ್ತು ಇತರ ಕಂಪನಿಗಳಿಗೆ ಸೇರಿದ ವಾಹನಗಳು ಸುರತ್ಕಲ್-ಗೋವಿಂದಾಸ್ ಸರ್ವೀಸ್ ರಸ್ತೆಯನ್ನು ಬಳಸುವುದನ್ನು ನಿಷೇಧಿಸಲಾಗಿದೆ.

ಸಂಚಾರಕ್ಕೆ ಸಹಕರಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದು ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…

ಅ. 26: ದ.ಕ. ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘದಿಂದ ಪುತ್ತೂರಿನಲ್ಲಿ ಗಾಣಿಗ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗಾಣಿಗ ಸಮಾಜ ಸೇವಾ ಸಂಘ ಮಂಗಳೂರು ಇದರ ವತಿಯಿಂದ ಪೆರ್ಣೆ…