ಕರಾವಳಿ

ಮಹೇಶ್ ಶೆಟ್ಟಿ ತಿಮರೋಡಿ ಒಂದು ವರ್ಷ ಗಡಿಪಾರು: ಆದೇಶ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಸೌಜನ್ಯ ಪರ ಹೋರಾಟಗಾರ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಒಂದು ವರ್ಷ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಆದೇಶ ಹೊರಡಿಸಿದ್ದಾರೆ.

chennai-shopping
maithri

ಪುತ್ತೂರು ಸಹಾಯಕ ಆಯುಕ್ತ (ಎಸಿ) ಸ್ಟೆಲ್ಲಾ ವರ್ಗಿಸ್ ಅವರಿಗೆ ಬೆಳ್ತಂಗಡಿ ಪೊಲೀಸರು ಪ್ರಕರಣದ ಬಗ್ಗೆ ವರದಿ ನೀಡಿದ್ದನ್ನು ಪರಿಶೀಲನೆ ನಡೆಸಿ ವರದಿಯ ಆಧಾರದಲ್ಲಿ ಸೆ.18ರಂದು ಮಹೇಶ್ ಶೆಟ್ಟಿ ತಿಮರೋಡಿಯನ್ನು ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಒಂದು ವರ್ಷಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಮಾಡಿರುವುದಾಗಿ ತಿಳಿದು ಬಂದಿದೆ.

ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಸುಮಾರು 32 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದು, ಈ ಹಿನ್ನಲೆಯಲ್ಲಿ ಬೆಳ್ತಂಗಡಿ ಪೊಲೀಸರು ಕೋರಿಕೆ ಸಲ್ಲಿಸಿದ್ದರು.

ಗಡಿಪಾರು ಮಾಡಿದ ಆದೇಶದ ಪ್ರತಿ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿಗೆ ಬಂದ ಬಳಿಕ ಗಡಿಪಾರು ಮಾಡುವ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts