tamanvi
ಕರಾವಳಿ

ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅವರಿಗೆ ವಿಶ್ವಕರ್ಮ ಶ್ರೀ ಪ್ರಶಸ್ತಿ ಪ್ರದಾನ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ರಾಜ್ಯಮಟ್ಟದ ಬೃಹತ್ ಶ್ರೀ ವಿರಾಟ್ ವಿಶ್ವಕರ್ಮ ಮಹೋತ್ಸವ ಸಂದರ್ಭದಲ್ಲಿ ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಅಧ್ಯಕ್ಷ ಪಿ. ಉಪೇಂದ್ರ ಆಚಾರ್ಯ ಅವರಿಗೆ ವಿಶ್ವಕರ್ಮ ಶ್ರೀ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಸಹಕಾರಿ ಕ್ಷೇತ್ರದ ಕೊಡುಗೆಯನ್ನು ಗುರುತಿಸಿ ಸೆ. 26ರಂದು ಬೆಂಗಳೂರು ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದ ಸಂಸ್ಥಾಪಕ ಕಾರ್ಯಾಧ್ಯಕ್ಷ ಸಹಕಾರ ರತ್ನ, ವಿಶ್ವಕರ್ಮ ನಾಡೋಜ ಡಾ. ಬಿ.ಎಂ. ಉಮೇಶ್ ಕುಮಾರ್ ನೇತೃತ್ವದಲ್ಲಿ ಸಮಾರಂಭ ನಡೆಯಿತು.

ಅರೆಮಾದನಹಳ್ಳಿ ಶ್ರೀ ವಿಶ್ವಕರ್ಮ ಜಗದ್ಗುರು ಪೀಠ ವಿಶ್ವಬ್ರಾಹ್ಮಣ ಮಹಾಸಂಸ್ಥಾನ ಮಠದ ಶ್ರೀ ಶಿವಸುಜ್ಆನಮೂರ್ತಿ ಮಹಾಸ್ವಾಮಿ, ಶ್ರೀಮದ್ ಪರಸಮಯ ಕೋಲರಿನಾಥರ್ ಅಧೀನಂ ಶ್ರೀ ಸ್ವಾಮಿ ಬುದ್ದಾತ್ಮಾನಂದ ಸರಸ್ವತಿ ಅವರು ಶುಭಾಶೀರ್ವಾದ ನೀಡಿದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಪದ್ಮಶ್ರೀ ಡಾ| ಚಂದ್ರಶೇಖರ ಕಂಬಾರ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಪ್ರಖ್ಯಾತ ಮನೋವೈದ್ಯರು ಹಾಗೂ ವೈದ್ಯ ಸಾಹಿತಿ ಪದ್ಮಶ್ರೀ ಡಾ| ಸಿ.ಆರ್. ಚಂದ್ರಶೇಖರ್, ಶಿಲ್ಪಿ ಅರುಣ್ ಯೋಗಿರಾಜ್ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…