pashupathi
ಕರಾವಳಿ

ಸುಳ್ಯ: ಸಮೀಕ್ಷೆ ವೇಳೆ ಶಿಕ್ಷಕಿಯ ಮೇಲೆರಗಿದ ನಾಯಿ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಸಮೀಕ್ಷೆ ನಡೆಸುತ್ತಿದ್ದ ಶಿಕ್ಷಕಿಯ ಮೇಲೆ ನಾಯಿ ದಾಳಿ ನಡೆಸಿದ ಘಟನೆ ಸುಳ್ಯ ತಾಲೂಕಿನ ಕೊಡಿಯಾಲ ಎಂಬಲ್ಲಿ ಶುಕ್ರವಾರ ಸಂಭವಿಸಿದೆ.

akshaya college

ಮೂಲಗಳ ಪ್ರಕಾರ, ಮೂವಪ್ಪೆ ಶಾಲೆಯ ಶಿಕ್ಷಕಿಯೊಬ್ಬರು ಸರ್ವೆಗಾಗಿ ಕೊಡಿಯಾಲದ ನಿದ್ಮಾರು ಎಂಬಲ್ಲಿನ ಮನೆಗೆ ಭೇಟಿ ನೀಡಿದ್ದರು. ಈ ವೇಳೆ ಆ ಮನೆಯ ನಾಯಿ ಇದ್ದಕ್ಕಿದ್ದಂತೆ ಆಕೆಯ ಮೇಲೆ ದಾಳಿ ಮಾಡಿದೆ. ಪರಿಣಾಮ ಶಿಕ್ಷಕಿಯ ಬಟ್ಟೆ ಹರಿದುಹೋಗಿದೆ.

ಶಿಕ್ಷಕಿ ತನ್ನನ್ನು ತಾನು ರಕ್ಷಿಸಿಕೊಳ್ಳಲು ತನ್ನ ಚೀಲವನ್ನು ಅಡ್ಡ ಹಿಡಿದಿದ್ದಾರೆ. ಈ ವೇಳೆ ಮನೆಯವರು ಹೊರಗೆ ಓಡಿಬಂದು ನಾಯಿಯನ್ನು ಹಿಡಿದುಕೊಂಡಿದ್ದಾರೆ.

ಈ ಘಟನೆಯಿಂದ ಶಿಕ್ಷಕಿ ತೀವ್ರವಾಗಿ ಬೆದರಿದ್ದು, ಸಮೀಕ್ಷೆಯನ್ನು ಮುಂದುವರಿಸಲು ಸಾಧ್ಯವಾಗದೆ ಮನೆಗೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ…