tamanvi
ಕರಾವಳಿ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬ್ಬಂದಿ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಳೆದ ಕೆಲವು ತಿಂಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಪುತ್ತೂರು ಶಾಸಕ ಅಶೋಕ್ ರೈ ಅವರ ಬಗ್ಗೆ ಅಸಭ್ಯ ಸಂದೇಶವನ್ನು ಹಾಕಿದ ಪ್ರಕರಣಕ್ಕೆ ಸಂಬಂದಿಸಿದಂತೆ ಸುಳ್ಯ ತಾಲೂಕು ಕಚೇರಿ ಪ್ರಥಮ ದರ್ಜೆ ಸಹಾಯಕ ಕಾರ್ತಿಕ್ ಎಂಬವರು ಶಾಸಕರ ಬಳಿ ಬಂದು ಕ್ಷಮೆ ಕೇಳಿದ್ದು, ಶಾಸಕರು ತಿಳಿ ಹೇಳಿದ್ದಾರೆ.

maithri

ಇನ್ನು ಮುಂದೆ ಯಾರ ಬಗ್ಗೆಯೂ ಅಸಭ್ಯ ಸಂದೇಶ ಕಳುಹಿಸಬೇಡ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಅಶೋಕ್ ರೈ ಶಾಸಕರಾಗಿ ಆಯ್ಕೆಯಾದ ಕೆಲವು ತಿಂಗಳ ಬಳಿಕ ಕಾರ್ತಿಕ್ ಫೇಸ್ ಬುಕ್ ನಲ್ಲಿ ಶಾಸಕರ ಬಗ್ಗೆ ಅಸಭ್ಯವಾದ ಪದಗಳನ್ನು ಬಳಸಿ ಸೋಶಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಇದರ ವಿರುದ್ದ ಅಶೋಕ್ ರೈ ಅಭಿಮಾನಿಗಳು ಪೊಲೀಸರಿಗೆ ದೂರು ನೀಡಿದ್ದರು. ಇದೀಗ ಪ್ರಕರಣದ ಬಗ್ಗೆ ಪೊಲೀಸ್ ತನಿಖೆ ಆರಂಭವಾಗುತ್ತಿದ್ದಂತೆಯೇ ಸರಕಾರಿ ನೌಕರ ಕಾರ್ತಿಕ್ ಅವರು ಶಾಸಕರಲ್ಲಿ ಬಂದು ನಾನು ತಪ್ಪು ಮಾಡಿದೆ, ನನ್ನನ್ನು ಕ್ಷಮಿಸಿ ಸರ್ ಎಂದು ಅಂಗಲಾಚಿಕೊಂಡರು. ನೀವು ಕ್ಷಮಿಸದೆ ಇದ್ದಲ್ಲಿ ನನಗೆ ತೊಂದರೆಯಾಗಲಿದ್ದು, ನನ್ನ ನೌಕರಿಗೂ ಕುತ್ತು ಬರಲಿದೆ ಎಂದು ಕೇಳಿಕೊಂಡರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕರು ನೀವು ನನ್ನ ಬಗ್ಗೆ ಕೆಟ್ಟ ಕಮೆಂಟ್ ಹಾಕಿದ್ದೀರಿ. ನಾನು ನಿಮಗಾಗಲಿ, ನಿಮ್ಮ ಕುಟುಂಬದವರಿಗಾಗಲಿ ಏನೂ ತೊಂದರೆ ಕೊಟ್ಟಿಲ್ಲ. ಮತ್ತೆ ಯಾಕೆ ನನ್ನ ಮೇಲೆ ಕೋಪ ಎಂದು ಕೇಳಿದರು. ನೀವು ಮಾಡಿದ ಈ ಕೃತ್ಯಕ್ಕೆ ನೀವು ಪಶ್ಚಾತ್ತಾಪಪಟ್ಟು ನನ್ನ ಬಳಿ ಬಂದಿದ್ದೀರಿ. ಇದಕ್ಕಾಗಿ ನಿಮ್ಮನ್ನು ಕ್ಷಮಿಸಿದ್ದೇನೆ. ಮುಂದಕ್ಕೆ ಯಾರ ಬಗ್ಗೆಯೂ ಕೆಟ್ಟ ಕಾಮೆಂಟ್ ಹಾಕಬೇಡಿ. ಈ ರೀತಿಯ ಕಾಮೆಂಟ್ ಹಾಕುವುದು ಸಭ್ಯರ ಲಕ್ಷಣವಲ್ಲ ಎಂದು ಬುದ್ದಿವಾದ ಹೇಳಿ ಕಳುಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…