tamanvi
ಕರಾವಳಿ

ಸಜೀಪ: ಶಿಕ್ಷಕರೊಬ್ಬರ ಮೇಲೆ ಜೇನು ನೊಣ ದಾಳಿ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬಂಟ್ವಾಳ: ಸಾಮಾಜಿಕ ಮತ್ತು ಶೈಕ್ಷಣಿಕ ಗಣತಿಗೆ ತೆರಳಿದ್ದ ಶಿಕ್ಷಕರೊಬ್ಬರ ಮೇಲೆ ಜೇನು ನೊಣಗಳು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಶನಿವಾರ ಬಂಟ್ವಾಳ ಸಜೀಪದ ಶಾರದಾನಗರ ಭಜನಾ ಮಂದಿರದ ಬಳಿ ಸಂಭವಿಸಿದೆ.

maithri

ಸಜೀಪಮೂಡ ಸರಕಾರಿ ಪ್ರೌಢಶಾಲಾ ಶಿಕ್ಷಕ ವೆಂಕಟರಮಣ ಗಾಯಗೊಂಡವರು. ಸದ್ಯಕ್ಕೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.

ಬಂಟ್ವಾಳ ತಾಲೂಕು ಪ್ರಭಾರ ಶಿಕ್ಷಣಾಧಿಕಾರಿ ಬಬಿತಾ ಹಾಗೂ ಇತರ ಅಧಿಕಾರಿಗಳು ಮನೆಗೆ ತೆರಳಿ ಆರೋಗ್ಯ ವಿಚಾರಿಸಿದ್ದಾರೆ. ಶನಿವಾರ ಬೆಳಗ್ಗೆ 9ರ ಸುಮಾರಿಗೆ ಅವರು ಒಂದು ಮನೆಯ ಗಣತಿ ಕಾರ್ಯ ಪೂರ್ಣಗೊಳಿಸಿ ಮತ್ತೊಂದು ಮನೆಗೆ ತೆರಳುತ್ತಿದ್ದಾಗ ಹೆಜ್ಜೇನು ದಾಳಿ ಮಾಡಿತು.

ಸ್ವಲ್ಪ ಹೊತ್ತು ಮನೆಯಲ್ಲಿ ಆಶ್ರಯ ಪಡೆದ ಅವರು ಸ್ಕೂಟರ್‌ನಲ್ಲಿ ಹೊರಟಾಗ ಮತ್ತೆ ದಾಳಿ ಮಾಡಿದವು. ಸುಮಾರು 2 ಕಿ.ಮೀ. ವರೆಗೂ ಹಿಂಬಾಲಿಸಿಕೊಂಡು ಬಂದು ಮುಖ ಹಾಗೂ ಕುತ್ತಿಗೆಯ ಭಾಗಕ್ಕೆ ಕಚ್ಚಿವೆ. ಬಳಿಕ ಅವರು ಮೇಲಧಿಕಾರಿಗಳಿಗೆ ಮಾಹಿತಿ ನೀಡಿ ಮಂಗಳೂರಿಗೆ ತೆರಳಿ ಚಿಕಿತ್ಸೆ ಪಡೆದರು. ಅಪಾಯದಿಂದ ಪಾರಾಗಿದ್ದರೂ ಹೆಚ್ಚಿನ ನೋವಿದೆ ಎಂದು ಶಿಕ್ಷಕರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…