tamanvi
ಕರಾವಳಿ

ಡಾ. ಶಾಂತಾ ಪುತ್ತೂರು ಅವರಿಗೆ ಆಕ್ಸಿಸ್ ಮ್ಯಾಕ್ಸ್ ಇನ್ಸೂರೆನ್ಸ್ ಶಿಕ್ಷಾರತ್ನ ಪ್ರಶಸ್ತಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಬಕ ಸರಕಾರಿ ಪ್ರೌಢಶಾಲಾ ಶಿಕ್ಷಕಿ ಡಾ.ಶಾಂತಾ ಪುತ್ತೂರು ಅವರಿಗೆ ಆಕ್ಸಿಸ್ ಮ್ಯಾಕ್ಸ್ ಇನ್ಸೂರೆನ್ಸ್ ಶಿಕ್ಷಾರತ್ನ 2025 ಪ್ರಶಸ್ತಿಯನ್ನು ಅತ್ತಾವರದ ಸಂಸ್ಥೆಯ ಕಚೇರಿಯಲ್ಲಿ ಪ್ರಧಾನ ಮಾಡಲಾಯಿತು.

maithri

ಕಳೆದ ಮೂವತ್ತು ವರ್ಷಗಳಿಂದ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಡಾ. ಶಾಂತಾ ಪುತ್ತೂರು ಅವರು, ಸ್ನಾತಕೋತ್ತರ ಪದವೀಧರರಾಗಿದ್ದು, ಯೋಗದಲ್ಲಿ ಡಿಪ್ಲೋಮ, ನಲಿಕಲಿ, ಯೋಗ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದಾರೆ. ಗೈಡ್ಸ್ ಶಿಕ್ಷಕಿಯೂ ಆಗಿರುವ ಇವರು, ವಿವಿಧ ವಿಷಯಗಳ ಸಂಪನ್ಮೂಲ ವ್ಯಕ್ತಿ ಯಾಗಿದ್ದಾರೆ. ಧರ್ಮಸ್ಥಳ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮ ಸ್ಥಳದ ಬಂಟ್ವಾಳ ತಾಲೂಕು ಯೋಗಸಂಘಟಕಿಯಾಗಿ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ ಕಾಸರಗೋಡು ಇದರ ಕರ್ನಾಟಕ ರಾಜ್ಯ ಸಂಚಾಲಕಿಯಾಗಿ, ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಪುತ್ತೂರು ಘಟಕದ ಅಧ್ಯಕ್ಷರಾಗಿದ್ದಾರೆ.

ಇವರ ಕವನ ಸಂಕಲನ ಸೌರಭ ಬಿಡುಗಡೆಗೊಂಡಿದ್ದು, ಅನೇಕ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದಾರೆ. ದೂರದರ್ಶನ ಚಂದನ ವಾಹಿನಿಯಲ್ಲಿ ಇವರ ಕವನ ಪ್ರಸಾರವಾಗಿದೆ. ಇವರ ಕವನ, ಲೇಖನ, ವ್ಯಕ್ತಿಚಿತ್ರ ವಿವಿಧ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಇವರ ಸಾಧನೆ ಗುರುತಿಸಿ ಆಕ್ಸಿಸ್ ಮ್ಯಾಕ್ಸ್ ಇನ್ಸೂರೆನ್ಸ್ ಶಿಕ್ಷಾರತ್ನ 2025 ಪ್ರಶಸ್ತಿ ನೀಡಿ ಗೌರವಿಸಿದೆ.

ಟ್ರ್ಯೈ ನಿಂಗ್ ಮ್ಯಾನೇಜರ್ ಸಚಿನ್ ಕೆ.ಎಸ್., ಮ್ಯಾನೇಜರ್ಸ್ ರಿತೇಶ್ ಶೆಟ್ಟಿ, ಆಶ್ರೀತ್ ಎನ್., ನಿದೀಶಾ ಉಪಸ್ಥಿತರಿದ್ದರು.

ಇವರೊಂದಿಗೆ  ಕವಿ, ಸಂಘಟಕ, ಶಿಕ್ಷಕ, ಪತ್ರಕರ್ತ ಜಯಾನಂದ ಪೆರಾಜೆ ಮತ್ತು ಸಮೂಹ ಸಂಪನ್ಮೂಲ ವ್ಯಕ್ತಿ ದೇವಕಿ ಅವರನ್ನು ಗೌರವಿಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…