ಕರಾವಳಿ

ತನ್ನ ಸಮುದಾಯಕ್ಕೆ ಕರೆ ನೀಡಿದ ದಲಿತ್ ಸೇವಾ ಸಮಿತಿ ನೂತನ ಜಿಲ್ಲಾಧ್ಯಕ್ಷ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಘಟನೆಯಿಂದ ಹೊರಗಿರುವ ತನ್ನ ಸಮುದಾಯವು ಕೈಜೋಡಿಸಿ ಬಲಿಷ್ಠ ಸಂಘಟನೆಯನ್ನು ಕಟ್ಟಲು ಅವಕಾಶ ನೀಡುವಂತೆ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಕೆ. ಗೋಪಾಲ್ ನೇರಳಕಟ್ಟೆ ಕರೆ ನೀಡಿದರು.

chennai-shopping
maithri

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷರನ್ನಾಗಿ ತನ್ನನ್ನು ಸಂಘದ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರು ಜಿಲ್ಲೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಿದ್ದಾರೆ. ಸಮುದಾಯದ ಸೇವೆಗೆ ಅವಕಾಶ ಸಿಕ್ಕಿದೆ. ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ, ಪಂಗಡದ ಜನರಿಗಾಗಿ ಸಂಘಟನೆ ಹೋರಾಟ ನಡೆಸುತ್ತಿದ್ದು, ಸಮುದಾಯದ ಎಲ್ಲರೂ ಸಂಘಟನೆಗೆ ಕೈಜೋಡಿಸಬೇಕು ಎಂದು ವಿನಂತಿಸಿಕೊಂಡರು.

ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಇದೀಗ 19ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಸಂಘಟನೆಯು ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಪಂಗಡದ ಜನರಿಗಾಗಿ ಹೋರಾಟ ಮತ್ತು ಸಮಾಜ ಸೇವೆಯೇ ನಮ್ಮ ಗುರಿಯಾಗಿದೆ. ಡಾ. ಬಿ.ಆರ್ ಅಂಬೇಡ್ಕರ್ ಅವರ ಇತಿಹಾಸವನ್ನು ನಮ್ಮ ಸಮುದಾಯಕ್ಕೆ ತಿಳಿಸಿರುವ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತೇವೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ವಿಟ್ಲದ ಕಾಯಾದ್ಯಕ್ಷ ಚಂದ್ರಶೇಖರ್ ಯು, ಜಿಲ್ಲಾ ಉಪಾಧ್ಯಕ್ಷ ಲೋಕೇಶ್ ತೆಂಕಿಲ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಲಿತಾ ಕಾರ್ಪಾಡಿ, ಸದಸ್ಯ ಲಕ್ಷ್ಮಣ ಪಾರೆ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts