tamanvi
ಕರಾವಳಿ

ತನ್ನ ಸಮುದಾಯಕ್ಕೆ ಕರೆ ನೀಡಿದ ದಲಿತ್ ಸೇವಾ ಸಮಿತಿ ನೂತನ ಜಿಲ್ಲಾಧ್ಯಕ್ಷ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂಘಟನೆಯಿಂದ ಹೊರಗಿರುವ ತನ್ನ ಸಮುದಾಯವು ಕೈಜೋಡಿಸಿ ಬಲಿಷ್ಠ ಸಂಘಟನೆಯನ್ನು ಕಟ್ಟಲು ಅವಕಾಶ ನೀಡುವಂತೆ ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಕೆ. ಗೋಪಾಲ್ ನೇರಳಕಟ್ಟೆ ಕರೆ ನೀಡಿದರು.

maithri

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿ ಜಿಲ್ಲಾಧ್ಯಕ್ಷರನ್ನಾಗಿ ತನ್ನನ್ನು ಸಂಘದ ಸ್ಥಾಪಕ ಅಧ್ಯಕ್ಷ ಸೇಸಪ್ಪ ಬೆದ್ರಕಾಡು ಅವರು ಜಿಲ್ಲೆಯ ಪದಾಧಿಕಾರಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಿದ್ದಾರೆ. ಸಮುದಾಯದ ಸೇವೆಗೆ ಅವಕಾಶ ಸಿಕ್ಕಿದೆ. ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ, ಪಂಗಡದ ಜನರಿಗಾಗಿ ಸಂಘಟನೆ ಹೋರಾಟ ನಡೆಸುತ್ತಿದ್ದು, ಸಮುದಾಯದ ಎಲ್ಲರೂ ಸಂಘಟನೆಗೆ ಕೈಜೋಡಿಸಬೇಕು ಎಂದು ವಿನಂತಿಸಿಕೊಂಡರು.

ದ.ಕ.ಜಿಲ್ಲಾ ದಲಿತ್ ಸೇವಾ ಸಮಿತಿ ಇದೀಗ 19ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಸಂಘಟನೆಯು ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಪಂಗಡದ ಜನರಿಗಾಗಿ ಹೋರಾಟ ಮತ್ತು ಸಮಾಜ ಸೇವೆಯೇ ನಮ್ಮ ಗುರಿಯಾಗಿದೆ. ಡಾ. ಬಿ.ಆರ್ ಅಂಬೇಡ್ಕರ್ ಅವರ ಇತಿಹಾಸವನ್ನು ನಮ್ಮ ಸಮುದಾಯಕ್ಕೆ ತಿಳಿಸಿರುವ ಕೆಲಸವನ್ನು ಅತ್ಯುತ್ತಮವಾಗಿ ಮಾಡುತ್ತೇವೆ ಎಂದರು.

ಪತ್ರಿಕಾಗೋಷ್ಟಿಯಲ್ಲಿ ಸಂಘಟನೆಯ ವಿಟ್ಲದ ಕಾಯಾದ್ಯಕ್ಷ ಚಂದ್ರಶೇಖರ್ ಯು, ಜಿಲ್ಲಾ ಉಪಾಧ್ಯಕ್ಷ ಲೋಕೇಶ್ ತೆಂಕಿಲ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಲಿತಾ ಕಾರ್ಪಾಡಿ, ಸದಸ್ಯ ಲಕ್ಷ್ಮಣ ಪಾರೆ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…