ಕರಾವಳಿ

ಪುತ್ತೂರಿನಲ್ಲಿ ಬೀದಿ ನಾಯಿಗಳ ಹಾವಳಿ ವಿರುದ್ಧ ತಕ್ಷಣ ಕ್ರಮಕೈಗೊಳ್ಳಿ: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ | ನಾಯಿಗಳು ಗುಂಪು ಸೇರಲು ಎಲ್ಲೆಂದರಲ್ಲಿ ಆಹಾರ ಹಾಕುವುದೇ ಕಾರಣ: ಸುಪ್ರೀಂ ಆದೇಶ ಪಾಲಿಸಲು ಒತ್ತಾಯ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ಬೀದಿನಾಯಿಗಳ ಉಪಟಳ ಅಧಿಕವಾಗಿದ್ದು ಇದಕ್ಕೆ ತಕ್ಷಣ ಪರಿಹಾರ ಕಂಡುಕೊಳ್ಳಬೇಕು ಎಂದು ಪುತ್ತೂರು‌ ಶಾಸಕ ಅಶೋಕ್ ರೈ ಅವರು ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದರು.

core technologies

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆ ವಹಿಸಿದ್ದರು.

akshaya college

ಪುತ್ತೂರು ನಗರದಲ್ಲಿ ಬೀದಿ ನಾಯಿಗಳ ಸಂಖ್ಯೆ ಅಧಿಕವಾಗಿದೆ. ನಾಯಿಗಳು ಮಕ್ಕಳ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ವ್ಯಕ್ತಿಯೋರ್ವರು ನಾಯಿ ಕಚ್ಚಿ ಸಾವನ್ನಪ್ಪಿದ್ದಾರೆ. ಇದು ಎಲ್ಲೂ ಮರುಕಳಿಸಬಾರದು. ಶಾಲೆ ಬಿಟ್ಟು ತೆರಳುವ ಸಂದರ್ಭದಲ್ಲಿ ನಾಯಿಗಳ ಗುಂಪು ಓಡಿಸಿದ್ದಲ್ಲಿ ಅಪಘಾತಗಳು ಉಂಟಾಗುವ ಸಾಧ್ಯತೆ ಇದೆ. ಪುತ್ತೂರಿನಲ್ಲಿ ಎಲ್ಲೆಂದರಲ್ಲಿ ನಾಯಿಗೆ ಆಹಾರ ಹಾಕುತ್ತಿರುವ ಕೆಲವು ವ್ಯಕ್ತಿಗಳಿಂದಾಗಿ ನಾಯಿಗಳು ಒಂದೆಡೆ ಗುಂಪು ಸೇರುತ್ತಿದೆ. ಸುಪ್ರಿಂ ಆದೇಶ ಪ್ರಕಾರ ನಾಯಿಗಳನ್ನು ಶೆಲ್ ನಲ್ಲಿ ಹಾಕಿ ಅಲ್ಲಿ ಆಹಾರ ಹಾಕುವ ವ್ಯವಸ್ಥೆಯನ್ನು ಕೂಡಲೇ ಜಾರಿ ಮಾಡಬೇಕು.

ಹುಚ್ಚು ನಾಯಿ ಕಡಿತಕ್ಕೊಳಗಾದಲ್ಲಿ ಅದರಿಂದ ಆಗುವ ಸಾವು ನೋವುಗಳನ್ನು ಸಹಿಸಲು ಯಾರಿಂದಲೂ ಸಾಧ್ಯವಿಲ್ಲ. ಜಿಲ್ಲಾಡಳಿತ ತಕ್ಷಣ ಎಚ್ಚೆತ್ತು ಬೀದಿ ನಾಯಿಗಳ ಉಪಟಳಕ್ಕೆ ಬ್ರೇಕ್ ಹಾಕಬೇಕು ಎಂದು ಸಭೆಗೆ ತಿಳಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಮಯಕ್ಕೆ ಸರಿಯಾಗಿ ಬನ್ನಿರೆಂದ ಡಾ. ಮೋಹನ್ ಆಳ್ವ! ‘ನೀವು ಒಮ್ಮೆ ಚುನಾವಣೆಗೆ ನಿಲ್ಲಿ’ರೆಂದ ಶಾಸಕ ಅಶೋಕ್ ರೈ

ಪುತ್ತೂರು: ಭಾನುವಾರ ಸಂಜೆ 5.45ಕ್ಕೆ ಸರಿಯಾಗಿ ಆಳ್ವಾಸ್ ಸಾಂಸ್ಕೃತಿಕ ವೈಭವ ಶುರುವಾಗಲಿದೆ. ಈ…

ನ. 16ರಂದು ಪುತ್ತೂರಿನಲ್ಲಿ ಅನಾವರಣಗೊಳ್ಳಲಿದೆ 350 ವಿದ್ಯಾರ್ಥಿಗಳ ಕಲಾಪ್ರದರ್ಶನ ‘ಆಳ್ವಾಸ್ ಸಾಂಸ್ಕೃತಿಕ ವೈಭವ’’

ಪುತ್ತೂರು: ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಆಳ್ವಾಸ್ ನುಡಿಸಿರಿ…

ನ. 19: ಪುತ್ತೂರಿನಲ್ಲಿ ‘ಅಟಲ್ ವಿರಾಸತ್’ ಬೃಹತ್ ಸಮಾವೇಶ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ

ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ…

ವೈದ್ಯಕೀಯ ವಿದ್ಯಾರ್ಥಿಗಳಿಂದ ಡ್ರಗ್ಸ್ ಪೆಡ್ಲಿಂಗ್‌| ಮೊಹಮ್ಮದ್ ನಿಗಾರೀಸ್, ಶಕೀಬ್, ಸಬೀರ್ ಉಳ್ಳಾಲ ಪೊಲೀಸರ ವಶ!

ಉಳ್ಳಾಲ: ಡ್ರಗ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿ ಸೇರಿದಂತೆ ಮೂವರನ್ನು…