ಕರಾವಳಿ

ಯಕ್ಷಗಾನದ ಒಳಗೆ ಸಲಿಂಗಕಾಮ ಬೆಳೆಯುತ್ತಿದೆ: ಪುರುಷೋತ್ತಮ ಬಿಳಿಮಲೆ | ಆಕ್ರೋಶದ ಬಳಿಕ ಕ್ಷಮೆ ಯಾಚನೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಯಕ್ಷಗಾನದ ಒಳಗೆ ಸಲಿಂಗ ಕಾಮ ಬೆಳೆಯುತ್ತದೆ, ಸ್ತ್ರೀವೇಶದ ಕಲಾವಿದರು ಅದನ್ನು ನಿರಾಕರಿಸಲಾರರು ಎಂದು ಕನ್ನಡ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಹೇಳಿಕೆ ನೀಡಿದ್ದಾರೆ.

core technologies

ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಪ್ರತಿಕ್ರಿಯೆ ಹುಟ್ಟಿಸಿದ್ದು, ಯಕ್ಷಗಾನ ಕಲಾವಿದರು ಸೇರಿ ಅಕಾಡೆಮಿ ಸದಸ್ಯರು ಹಾಗೂ ಅಧ್ಯಕ್ಷರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

akshaya college

ಪ್ರೊ. ಪುರುಷೋತ್ತಮ ಬಿಳಿಮಲೆ ಅವರು ಮೊದಲು ಮಾಡಿದ್ದ ಹೇಳಿಕೆಯಂತೆ 6–8 ತಿಂಗಳು ಹೊರಗಡೆ ಜೀವನ ನಡೆಸುವ ಕಲಾವಿದರಿಗೆ ಮೋಹದ ಅಗತ್ಯ ಬರುವುದು ಸಹಜ. ಅನೇಕರು ಇದನ್ನು ಅನುಭವಿಸುತ್ತಾರೆ ಎಂದು ಹೇಳಿದ್ದು, ಯಕ್ಷಗಾನ ಕಲಾವಿದರ ವೈಯಕ್ತಿಕ ಬದುಕಿನ ಬಗ್ಗೆ ತಪ್ಪು ಕಲ್ಪನೆ ಹರಿ ಬಿಟ್ಟುಕೊಂಡಿದ್ದಾರೆ.

ಕ್ಷಮೆ ಕೋರಿದ ಬಿಳಿಮಲೆ:

ಯಕ್ಷಗಾನ ಕಲಾವಿದರಿಗೆ ಅವಮಾನ ಮಾಡುವ ಉದ್ದೇಶ ನನ್ನದಲ್ಲ. ಯಕ್ಷಗಾನ ಹಿಂದೂ ಧರ್ಮದ್ದಲ್ಲ ಎಂದು ಹೇಳಿದ್ದೇನೆ. ಅದು ಕಲೆಯೊಂದರ ರೂಪ. ಕಲಾವಿದರು ಅನುಭವಿಸುವ ನೋವುಗಳನ್ನು ಹೇಳಿದ್ದೇನೆ ಹೊರತು ಅವರ ಮಾನಹಾನಿ ಮಾಡುವ ಉದ್ದೇಶ ನನ್ನದಲ್ಲ. ಆದರೇ ಕಲಾವಿದರಿಗೆ ನೋವಾದರೆ ಕ್ಷಮೆ ಕೇಳುತ್ತೇನೆ. ಹೇಳಿಕೆಯನ್ನು ಹಿಂದಕ್ಕೆ ಪಡೆಯುತ್ತೇನೆ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಮಯಕ್ಕೆ ಸರಿಯಾಗಿ ಬನ್ನಿರೆಂದ ಡಾ. ಮೋಹನ್ ಆಳ್ವ! ‘ನೀವು ಒಮ್ಮೆ ಚುನಾವಣೆಗೆ ನಿಲ್ಲಿ’ರೆಂದ ಶಾಸಕ ಅಶೋಕ್ ರೈ

ಪುತ್ತೂರು: ಭಾನುವಾರ ಸಂಜೆ 5.45ಕ್ಕೆ ಸರಿಯಾಗಿ ಆಳ್ವಾಸ್ ಸಾಂಸ್ಕೃತಿಕ ವೈಭವ ಶುರುವಾಗಲಿದೆ. ಈ…

ನ. 16ರಂದು ಪುತ್ತೂರಿನಲ್ಲಿ ಅನಾವರಣಗೊಳ್ಳಲಿದೆ 350 ವಿದ್ಯಾರ್ಥಿಗಳ ಕಲಾಪ್ರದರ್ಶನ ‘ಆಳ್ವಾಸ್ ಸಾಂಸ್ಕೃತಿಕ ವೈಭವ’’

ಪುತ್ತೂರು: ಮೂಡಬಿದಿರೆಯ ಪ್ರತಿಷ್ಠಿತ ಆಳ್ವಾಸ್ ಎಜುಕೇಶನ್ ಫೌಂಡೇಶನ್‌ನ ಆಳ್ವಾಸ್ ನುಡಿಸಿರಿ…

ನ. 19: ಪುತ್ತೂರಿನಲ್ಲಿ ‘ಅಟಲ್ ವಿರಾಸತ್’ ಬೃಹತ್ ಸಮಾವೇಶ | ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ

ಪುತ್ತೂರು: ಮಾಜಿ ಪ್ರಧಾನಿ, ಭಾರತ ರತ್ನ ಅಟಲ್‌ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವ ವರ್ಷದ…