tamanvi
ಕರಾವಳಿ

ಕುದ್ರೋಳಿಯಲ್ಲಿ ಅಧಿಕೃತ ಕಸಾಯಿಖಾನೆಗೆ ತೆರೆಯಲು ಆಗ್ರಹ | ಆಡು, ಕುರಿ, ದನದ ಮಾಂಸಾಹಾರಿಗಳಿಗೆ ಆಹಾರದ ಹಕ್ಕು ನಿರಾಕರಣೆ ಖಂಡಿಸಿ ಪ್ರತಿಭಟನೆ!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕುದ್ರೋಳಿಯಲ್ಲಿ ಅಧಿಕೃತ ಕಸಾಯಿಖಾನೆ ತೆರೆಯಲು ಒತ್ತಾಯಿಸಿ ಮತ್ತು ಸಂಸ್ಕರಿತ ಆಡು, ಕುರಿ, ದನದ ಮಾಂಸಾಹಾರಿಗಳಿಗೆ ಆಹಾರದ ಹಕ್ಕನ್ನು ನಿರಾಕರಿಸಿದ ಕ್ರಮವನ್ನು ಖಂಡಿಸಿ ಹಾಗೂ ದ.ಕ. ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿ ಕುದ್ರೋಳಿ ಕಸಾಯಿಖಾನೆಯ ಮುಂದೆ ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಮಾತನಾಡಿದ ಡಿವೈಎಫ್ಐ ಮಾಜಿ ರಾಜ್ಯಾಧ್ಯಕ್ಷ ಸುನೀಲ್ ಕುಮಾರ್, ರಾಜಕೀಯ ದುರುದ್ದೇಶದಿಂದ ಮುಚ್ಚಿರುವ ನಗರದ ಕುದ್ರೋಳಿಯಲ್ಲಿರುವ ಜಿಲ್ಲೆಯ ಏಕೈಕ ಅಧಿಕೃತ ಕಸಾಯಿಖಾನೆಯ ಬಡ ಮಾಂಸ ವ್ಯಾಪಾರಿಗಳ ಮೇಲೆ ಕೋಕ ಕಾಯ್ದೆ ಹಾಕಿ ರಾಜ್ಯ ಕಾಂಗ್ರೆಸ್ ಸರಕಾರ ಆರೆಸ್ಸೆಸ್‌ ನೀತಿಯನ್ನು ಪೊಲೀಸರ ಮೂಲಕ ಜಾರಿ ಮಾಡುತ್ತಿದೆ ಎಂದು ಆರೋಪಿಸಿದರು.

ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಝ್ ಮಾತನಾಡಿ, ದ.ಕ.ಜಿಲ್ಲಾಡಳಿತ ಸಂಘ ಪರಿವಾರದ ನಿಯಂತ್ರಣದಲ್ಲಿದೆಯಾ ಎಂಬ ಅನುಮಾನ ಕಾಡುತ್ತಿದೆ. ಜಿಲ್ಲೆಯ ಮಾಂಸಹಾರಿಗಳಿಗೆ ಸಂಸ್ಕರಿತ ಮಾಂಸ ಸರಬರಾಜು ಆಗಬೇಕಾದ ಅಧಿಕೃತ ಕಸಾಯಿಖಾನೆಯನ್ನು ಮುಚ್ಚಿರುವುದು ಕಾನೂನು ಬಾಹಿರವಾಗಿದೆ. ಮುಂದಿನ ಹದಿನೈದು ದಿನಗಳಲ್ಲಿ ಕುದ್ರೋಳಿ ಕಸಾಯಿಖಾನೆ ತೆರೆಯದಿದ್ದರೆ ʼನಗರ ಪಾಲಿಕೆ ಚಲೋ ಹೋರಾಟʼ ಹಮ್ಮಿಕೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಡಿವೈಎಫ್ಐ ಮುಖಂಡರಾದ ಶ್ರೀನಾಥ್ ಕುಲಾಲ್, ನವೀನ್ ಕೊಂಚಾಡಿ, ಮಾಧುರಿ ಬೋಳಾರ, ಮನೋಜ್ ವಾಮಂಜೂರು, ಮನೋಜ್ ಕುಲಾಲ್, ಜಗದೀಶ್ ಬಜಾಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…