ಕರಾವಳಿ

ಬೀರಮಲೆ ಪ್ರಜ್ಞಾ ಆಶ್ರಮದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಹುಟ್ಟುಹಬ್ಬವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟಿನ ಬಲ್ನಾಡು ಶೌರ್ಯ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಬೀರಮಲೆ ಪ್ರಜ್ಞಾ ಆಶ್ರಮದಲ್ಲಿ ಆಚರಿಸಲಾಯಿತು.

chennai-shopping
maithri

prajna-ashrama

ಮಂಗಳವಾರ ನಡೆದ ಸರಳ ಕಾರ್ಯಕ್ರಮದಲ್ಲಿ ಆಶ್ರಮದ ವಿಶೇಷ ಚೇತನ ವಿದ್ಯಾರ್ಥಿಗಳೊಂದಿಗೆ ದೀಪ ಬೆಳಗಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಶುಭಹಾರೈಸಲಾಯಿತು. ಇದೇ ಸಂದರ್ಭ ಆಶ್ರಮದ ವಿದ್ಯಾರ್ಥಿಗಳಿಗೆ ಹಣ್ಣು ಹಂಪಲು ಹಾಗೂ ಉಪಾಹಾರ ನೀಡಲಾಯಿತು.

ಜಿಲ್ಲಾ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಮಾತನಾಡಿ, ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಾಮಾಜಿಕ ಕಾರ್ಯದ ಬಗ್ಗೆ ಸದಾ ಆಲೋಚಿಸುವವರು. ಹಾಗಾಗಿ ಅವರ ಹುಟ್ಟುಹಬ್ಬವನ್ನು ಬೀರಮಲೆ ಪ್ರಜ್ಞಾ ಮಾನಸಿಕ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದೇವೆ. ಹೆಗ್ಗಡೆ ಅವರಿಗೆ ನೆಮ್ಮದಿಯ ಜೀವನವನ್ನು, ಆಯುಷ್ಯ ಆಯುರಾರೋಗ್ಯ ಭಾಗ್ಯವನ್ನು ಕರುಣಿಸಲಿ ಎಂದು ಹಾರೈಸಿದರು.

ತಾಲೂಕು ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಮಹಾಬಲ ರೈ, ತಾಲೂಕು ಯೋಜನಾಧಿಕಾರಿ ಶಶಿಧರ್, ತಾಲೂಕು ಲೆಕ್ಕಪರಿಶೋಧಕಿ ಲತಾ, ಬಲ್ನಾಡು ವಲಯ ಮೇಲ್ವಿಚಾರಕ ಪ್ರಶಾಂತ್ ಕುಮಾರ್, ಪ್ರಜ್ಞಾ ವಿಕಲಚೇತನರ ಪುನರ್ವಸತಿ ಕೇಂದ್ರದ ಅಣ್ಣಪ್ಪ ದಂಪತಿ, ಬಲ್ನಾಡು ಶೌರ್ಯ ಘಟಕದ ಪ್ರತಿನಿಧಿ ವಿನಯ ನಾಯ್ಕ, ಸಂಯೋಜಕಿ ಆಶಾಲತಾ, ಸದಸ್ಯರಾದ ಲೋಕೇಶ್, ಜಗದೀಶ್, ಹರಿಪ್ರಸಾದ್, ದಿನೇಶ್, ವಿನೋದ್, ಸುಗಂಧಿ, ಸುಮಿತ್ರಾ, ಸೇವಾಪ್ರತಿನಿಧಿ ಇಗ್ನೇಶಿಯಸ್ ಡಿ ಸೋಜ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts