tamanvi
ಕರಾವಳಿ

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ವಕೀಲರ ನಿಯೋಗ | ಹೈಕೋರ್ಟ್ ಮುಖ್ಯ ನ್ಯಾಯಾಧೀಶರಲ್ಲಿ ಚರ್ಚಿಸಿ ನಿರ್ಧರಿಸುವುದಾಗಿ ಮುಖ್ಯಮಂತ್ರಿ ಭರವಸೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಕರಾವಳಿ ಭಾಗದ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಮಾಡುವಂತೆ ಒತ್ತಾಯಿಸಿ, ಕರ್ನಾಟಕ ವಿಧಾನ ಪರಿಷತ್ ಸದಸ್ಯರೂ, ವಕೀಲರು ಆದ ಶ್ರೀ ಐವನ್ ಡಿ ಸೋಜಾ ರವರ ನೇತೃತ್ವದಲ್ಲಿ, ಜಿಲ್ಲೆಯ ವಕೀಲರ ನಿಯೋಗವು ದಿನಾಂಕ 3 12 2025 ರಂದು ಮಂಗಳೂರಿನ ಸರ್ಕ್ಯೂಟ್ ಹೌಸಿನಲ್ಲಿ, ಕರ್ನಾಟಕ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

maithri

ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಯವರು, ಕರಾವಳಿ ಭಾಗದ ಜನರಿಗೆ ಅನುಕೂಲವಾಗುವ ದೃಷ್ಟಿಯಿಂದ, ಹೈಕೋರ್ಟ್ ಪೀಠ ಮಂಗಳೂರಿನಲ್ಲಿ ಆರಂಭಿಸುವುದು ಅತಿ ಅಗತ್ಯವಾಗಿರುವುದನ್ನು ನಾನು ಮನ ಗಂಡಿರುತ್ತೇನೆ. ಈ ವಿಚಾರದಲ್ಲಿ ಕರ್ನಾಟಕದ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ನಿಯೋಗಕ್ಕೆ ಭರವಸೆ ನೀಡಿದರು.

ವಕೀಲರ ನಿಯೋಗದಲ್ಲಿ ಹಿರಿಯ ವಕೀಲರಾದ ಟಿ ಎನ್ ಪೂಜಾರಿ, ನೂರುದ್ದೀನ್ ಸಾಲ್ಮರ, ಎಂ ಆರ್ ಬಲ್ಲಾಳ್, ಯಶವಂತ ಮರೋಲಿ, ಮಂಗಳೂರು ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ, ದ.ಕ.ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಿಚರ್ಡ್ ಕೋಸ್ಟ, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಿ. ಜಗನ್ನಾಥ ರೈ, ಉಪಾಧ್ಯಕ್ಷ ಮೋನಪ್ಪ, ಕಾರ್ಯದರ್ಶಿ ಚಿನ್ಮಯ ರೈ ಜೊತೆ ಕಾರ್ಯದರ್ಶಿ ಮಮತಾ ಸುವರ್ಣ, ಮೂಡಬಿದ್ರೆ ವಕೀಲರ ಸಂಘದ ಅಧ್ಯಕ್ಷ ಹರೀಶ್ ಕುಮಾರ್, ಮಹಮ್ಮದ್ ಅಸ್ಕರ್ ಮಂಗಳೂರು ಹಾಗೂ ಕರಾವಳಿ ಜಿಲ್ಲೆಯ ವಿವಿಧ ವಕೀಲರ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…