tamanvi
ಕರಾವಳಿ

ಬಜತ್ತೂರು: ಕಾಡಾನೆ ದಾಳಿಗೆ ಕೃಷಿ ನಾಶ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿನ ನಿವಾಸಿ ಮೋಹನದಾಸ್ ಕಾಮತ್ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಬಾಳೆಗಿಡ ಸಹಿತ ಕೃಷಿ ಬೆಳೆಗಳನ್ನು ನಾಶ ಮಾಡಿದ ಬಗ್ಗೆ ವರದಿಯಾಗಿದೆ.

maithri

ಶುಕ್ರವಾರ ನಸುಕಿನ 3.15 ರ ಸುಮಾರಿಗೆ ನಾಯಿಗಳು ವಿಪರೀತ ಬೊಗಳಲಾರಂಭಿಸಿದ್ದು, ಈ ವೇಳೆ ತೋಟಕ್ಕೆ ನುಗ್ಗಿದ ಕಾಡಾನೆಗಳು ತೋಟದಲ್ಲಿದ್ದ ಬಾಳೆಗಿಡಗಳನ್ನು ಧ್ವಂಸಗೊಳಿಸಿದ್ದವು. ಅವುಗಳ ಸಂಚಾರದಿಂದ ತೋಟದಲ್ಲಿ ಅಳವಡಿಸಲಾದ ನೀರಿನ ಪೈಪು ಲೈನ್‍ಗಳು ಹಾನಿಗೀಡಾಗಿದೆ ಹಾಗೂ ತೋಟದ ಸುರಕ್ಷತೆಗೆ ಹಾಕಿದ್ದ ಬೇಲಿಯನ್ನೂ ಧ್ವಂಸಗೊಳಿಸಿವೆ. ತೋಟದಲ್ಲಿ ಇರಿಸಲಾದ ಜೇನು ಪೆಟ್ಟಿಗೆಗಳೂ ಕಾಡಾನೆಯ ದಾಳಿಗೆ ಹಾನಿಗೀಡಾಗಿದ್ದು, ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ದೂರಿದ್ದಾರೆ.

ಮಳೆಗಾಲ ಆರಂಭವಾದಗಿನಿಂದ ಇದು ಮೂರನೇ ಬಾರಿಯ ಕಾಡಾನೆ ದಾಳಿಯಾಗಿದ್ದು, ಈ ಮೊದಲು 2 ಬಾರಿ ಆನೆಗಳು ತೋಟದ ಪರಿಸರದಲ್ಲಿ ಶಾಂತವಾಗಿ ಸಂಚರಿಸುತ್ತಾ ಸಾಗಿದ್ದರೆ, ಈ ಬಾರಿ ಎಲ್ಲಾ ಕೃಷಿ ಬೆಳೆಗಳನ್ನು ಹಾನಿಗೀಡು ಮಾಡಿದೆ ಎಂದು ಮೋಹನದಾಸ ಕಾಮತ್ ರವರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…