tamanvi
ಕರಾವಳಿ

ಬಜತ್ತೂರು: ಕಾಡಾನೆ ದಾಳಿಗೆ ಕೃಷಿ ನಾಶ!

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿ: ಇಲ್ಲಿಗೆ ಸಮೀಪದ ಬಜತ್ತೂರು ಗ್ರಾಮದ ನೀರಕಟ್ಟೆ ಎಂಬಲ್ಲಿನ ನಿವಾಸಿ ಮೋಹನದಾಸ್ ಕಾಮತ್ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು ಬಾಳೆಗಿಡ ಸಹಿತ ಕೃಷಿ ಬೆಳೆಗಳನ್ನು ನಾಶ ಮಾಡಿದ ಬಗ್ಗೆ ವರದಿಯಾಗಿದೆ.

ಶುಕ್ರವಾರ ನಸುಕಿನ 3.15 ರ ಸುಮಾರಿಗೆ ನಾಯಿಗಳು ವಿಪರೀತ ಬೊಗಳಲಾರಂಭಿಸಿದ್ದು, ಈ ವೇಳೆ ತೋಟಕ್ಕೆ ನುಗ್ಗಿದ ಕಾಡಾನೆಗಳು ತೋಟದಲ್ಲಿದ್ದ ಬಾಳೆಗಿಡಗಳನ್ನು ಧ್ವಂಸಗೊಳಿಸಿದ್ದವು. ಅವುಗಳ ಸಂಚಾರದಿಂದ ತೋಟದಲ್ಲಿ ಅಳವಡಿಸಲಾದ ನೀರಿನ ಪೈಪು ಲೈನ್‍ಗಳು ಹಾನಿಗೀಡಾಗಿದೆ ಹಾಗೂ ತೋಟದ ಸುರಕ್ಷತೆಗೆ ಹಾಕಿದ್ದ ಬೇಲಿಯನ್ನೂ ಧ್ವಂಸಗೊಳಿಸಿವೆ. ತೋಟದಲ್ಲಿ ಇರಿಸಲಾದ ಜೇನು ಪೆಟ್ಟಿಗೆಗಳೂ ಕಾಡಾನೆಯ ದಾಳಿಗೆ ಹಾನಿಗೀಡಾಗಿದ್ದು, ಭಾರೀ ಪ್ರಮಾಣದ ನಷ್ಟ ಸಂಭವಿಸಿದೆ ಎಂದು ದೂರಿದ್ದಾರೆ.

ಮಳೆಗಾಲ ಆರಂಭವಾದಗಿನಿಂದ ಇದು ಮೂರನೇ ಬಾರಿಯ ಕಾಡಾನೆ ದಾಳಿಯಾಗಿದ್ದು, ಈ ಮೊದಲು 2 ಬಾರಿ ಆನೆಗಳು ತೋಟದ ಪರಿಸರದಲ್ಲಿ ಶಾಂತವಾಗಿ ಸಂಚರಿಸುತ್ತಾ ಸಾಗಿದ್ದರೆ, ಈ ಬಾರಿ ಎಲ್ಲಾ ಕೃಷಿ ಬೆಳೆಗಳನ್ನು ಹಾನಿಗೀಡು ಮಾಡಿದೆ ಎಂದು ಮೋಹನದಾಸ ಕಾಮತ್ ರವರು ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರು ಚಲೋಗೆ ಅನುಮತಿ ನೀಡದಿರಿ: ಎಸ್.ಡಿ.ಪಿ.ಐ. | ಪಿ.ಜಿ. ಜಗನ್ನಿವಾಸ್ ರಾವ್ ಮನೆಗೆ ಚಲೊ ಮಾಡಿ: ಅನ್ವರ್ ಸಾದಾತ್

ಪುತ್ತೂರು: ಆ. 22ರಂದು ದರ್ಬೆಯಲ್ಲಿ ನಡೆದ ಸಣ್ಣ ಘಟನೆಯನ್ನು ಮುಂದಿಟ್ಟುಕೊಂಡು ಕಾನೂನು…