tamanvi
ಕರಾವಳಿ

ಭಕ್ತಕೋಡಿ ಭಗವಧ್ವಜಕಟ್ಟೆ ಧ್ವಂಸ ಪ್ರಕರಣ: ಪುತ್ತಿಲ ಖಂಡನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು ಸ್ಥಳೀಯ ರಾಜಕಾರಣಿಗಳ ಕುಮ್ಮಕ್ಕಿನಿಂದ ರಾಜಕೀಯ ಪ್ರೇರಿತವಾಗಿ ಭಕ್ತಕೋಡಿಯಲ್ಲಿ ಭಗವಾಧ್ವಜದ ಕಟ್ಟೆಯ ತೆರವು ಕಾರ್ಯ ನಡೆದಿದ್ದು, ಈ ಬೆಳವಣಿಗೆ ಅಧಿಕಾರಿಗಳಿಗೆ ಶೋಭೆ ತರುವಂತದಲ್ಲ ಎಂದು ಅರುಣ್ ಕುಮಾರ್ ಪುತ್ತಿಲ ಪ್ರತಿಕ್ರಿಯಿಸಿದ್ದಾರೆ.

ಸ್ಥಳೀಯ ಪಂಚಾಯತ್ ಅಧ್ಯಕ್ಷರ ಮಾತಿಗೂ ಬೆಲೆ ನೀಡದ ಅಧಿಕಾರಿಗಳ ಮೇಲೆ ಗ್ರಾಮ ಪಂಚಾಯತ್ ಕಾನೂನು ಕ್ರಮ ಕೈಗೊಳ್ಳಬೇಕು. ಹಲವು ವರ್ಷಗಳಿಂದ ಇದ್ದ ಭಗವಧ್ವಜದ ಕಟ್ಟೆಯನ್ನು ತೆರವುಗೊಳಿಸಿದ್ದು ಹಿಂದೂಗಳ ಧಾರ್ಮಿಕ ನಂಬಿಕೆ ಮೇಲಿನ ದಾಳಿಯಾಗಿದೆ. ಇದು ಖಂಡನೀಯ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪದೇಪದೇ ಈ ರೀತಿಯ ಘಟನೆ ನಡೆಯುತ್ತಿದ್ದು, ರಾಜಕೀಯ ಲಾಭಕ್ಕಾಗಿ ಹಿಂದೂ ಸಮಾಜವನ್ನು ಕೆಣಕುವ ಪ್ರಯತ್ನ ಮಾಡುತ್ತಿದೆ. ಈ ರೀತಿಯ ದ್ವೇಷದ ರಾಜಕಾರಣಕ್ಕೆ ಮುಂದಿನ ದಿವಸದಲ್ಲಿ ಹಿಂದೂ ಸಮಾಜ ಉತ್ತರ ನೀಡಲು ಸಿದ್ದವಾಗಿದೆ ಎಂದು ಹೇಳಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…