tamanvi
ಕರಾವಳಿ

ಸೂರಂಬೈಲು: ಅಗ್ನಿ ಅವಘಡದಿಂದ ಮನೆ ಸಂಪೂರ್ಣ ನಾಶ | ಪುತ್ತಿಲ ಪರಿವಾರ ಟ್ರಸ್ಟ್‌ನಿಂದ ನೆರವು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸೂರಂಬೈಲು ನಿವಾಸಿ ಜಯಲಕ್ಷ್ಮಿ ಅವರ ಮನೆ ಸಂಪೂರ್ಣ ಸುಟ್ಟು ಭಸ್ಮವಾಗಿದ್ದು, ಸುಮಾರು 10ರಿಂದ 15 ಲಕ್ಷ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರುಣ್ ಕುಮಾರ್ ಪುತ್ತಿಲ ಅವರು, ಪುತ್ತಿಲ ಪರಿವಾರ ಟ್ರಸ್ಟ್ ವತಿಯಿಂದ ಜಯಲಕ್ಷ್ಮಿಯವರ ಕುಟುಂಬಕ್ಕೆ ತುರ್ತು ಸಹಾಯಧನವನ್ನು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಅಗ್ನಿ ಅವಘಡದಿಂದ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಕುಟುಂಬದ ನೆರವಿಗೆ ಸರ್ಕಾರವು ತಕ್ಷಣ ಸ್ಪಂದಿಸಿ, ಮನೆ ಪುನರ್‌ನಿರ್ಮಾಣಕ್ಕೆ ಅಗತ್ಯ ಸಹಾಯ ನೀಡಬೇಕು” ಎಂದು ಒತ್ತಾಯಿಸಿದರು.

ಒಂದು ವೇಳೆ ಸರ್ಕಾರ ಹಾಗೂ ಸಂಬಂಧಿಸಿದ ಜನಪ್ರತಿನಿಧಿಗಳು ಈ ಘಟನೆಗೆ ಸೂಕ್ತವಾಗಿ ಸ್ಪಂದಿಸದಿದ್ದಲ್ಲಿ, ಮುಂದಿನ ದಿನಗಳಲ್ಲಿ ಊರಿನ ಜನರ ಸಹಕಾರದೊಂದಿಗೆ ಹಾಗೂ ಪುತ್ತಿಲ ಪರಿವಾರ ಟ್ರಸ್ಟ್‌ನ ಸದಸ್ಯರು ಜಯಲಕ್ಷ್ಮಿಯವರ ಕುಟುಂಬದ ಜೊತೆ ನಿಂತು, ಮನೆ ನಿರ್ಮಾಣ ಸೇರಿದಂತೆ ಎಲ್ಲಾ ಅಗತ್ಯ ಕಾರ್ಯಗಳಿಗೆ ಸಹಕಾರ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪುತ್ತಿಲ ಪರಿವಾರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪ್ರೇಮ್ ರಾಜ್ ಆರ್ಲಪದವು, ಸುರೇಶ್ ತುಂಬಡ್ಕ, ಶ್ರೀನಿವಾಸ ಕುಲಾಲ್ ಉಡ್ಡಂಗಳ, ಸುಖಿನ್ ರಾಜ್, ಹರೀಶ್ ಕಡಮಾಜೆ, ಪ್ರಕಾಶ್ ಕೀಲಂಪಾಡಿ, ಸಂದೀಪ್, ಪ್ರದೀಪ್ ಪಾಣಾಜೆ, ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಪ್ರಕಾಶ್, ರವಿಕುಮಾರ್ ಭರಣ್ಯ, ಸೀತಾ ಪರಿವಾರದ ಮಾತೆಯರು ಹಾಗೂ ಊರಿನ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…