tamanvi
ಕರಾವಳಿ

ಸಮಸ್ಯೆ ಎದುರಾದಾಗ ಧೈರ್ಯದಿಂದ ಎದುರಿಸಿ: ಶ್ರೀಕಾಂತ್ ಪೂಜಾರಿ ಬಿರಾವು

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಯುವ ಜನರು ಮಾದಕ ದ್ರವ್ಯ ವ್ಯಸನ, ಸಾಮಾಜಿಕ ಜಾಲತಾಣ ಮತ್ತು ಮಾನಸಿಕ ಖಿನ್ನತೆ ಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದು, ಹಲವಾರು ಸಮಸ್ಯೆಗಳು ಬಂದರೂ ಯುವಜನರು ತಾಳ್ಮೆ ಕಳೆದುಕೊಳ್ಳದೆ, ಸಮಸ್ಯೆಗಳು ಎದುರಾದಾಗ ಧೈರ್ಯದಿಂದ ಎದುರಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರರಾದ ಶ್ರೀಕಾಂತ್ ಪೂಜಾರಿ ಬಿರಾವು ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಇದರ ವತಿಯಿಂದ ದೇವರಾಜ ಅರಸು ಹಿಂದುಳಿದ ವರ್ಗಗಳ ಬಾಲಕಿಯರ ಮೆಟ್ರಿಕ್ ನಂತರದ ವಸತಿ ನಿಲಯ ಬನ್ನೂರು ಇಲ್ಲಿ ಮಾದಕ ದ್ರವ್ಯ ವ್ಯಸನ, ಸಾಮಾಜಿಕ ಜಾಲತಾಣ, ಆರೋಗ್ಯ ಮತ್ತು ಜೀವನಶೈಲಿ ಕುರಿತಾದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾದಕ ವ್ಯಸನದಿಂದ ಬಹಳಷ್ಟು ಯುವಜನರು ಜೀವನ ನಾಶಮಾಡಿಕೊಳ್ಳುತ್ತಿದ್ದು ಇದರಿಂದ ಆರೋಗ್ಯದ ಮೇಲೆ ಬಹಳಷ್ಟು ಪರಿಣಾಮ ಬೀರಲಿದೆ. ಮಾದಕ ವ್ಯಸನದ ಅರಿವು ಮೂಡಿಸುವ ಜವಾಬ್ದಾರಿ ಎಲ್ಲಾ ಯುವಜನರ ಮೇಲಿದ್ದು ನಶಾ ಮುಕ್ತ ಭಾರತದೊಂದಿಗೆ ಭಾಗವಹಿಸಿ ಯಾವುದೇ ಬೆದರಿಕೆ, ಮಾನಸಿಕ ಖಿನ್ನತೆಗೆ ಒಳಗಾಗಿ ನಕಾರಾತ್ಮಕ ಅಲೋಚನೆ ಮಾಡದಿರಿ ಎಂದು ಹೇಳಿದರು.

ವಸತಿ ನಿಲಯದ ನಿಲಯ ಮೇಲ್ವಿಚಾರಕಿ ದೀಪಾ ಮಾತನಾಡಿ, ಸಾಮಾಜಿಕ ಜಾಲತಾಣದ ಬಳಕೆ ಒಳ್ಳೆಯ ಉದ್ದೇಶಕ್ಕಾಗಿ ಬಳಸಿ ಇದರಿಂದ ಅನಾಹುತ ತಂದಕೊಳ್ಳಬೇಡಿ. ಯುವಜನರು ಉದ್ಯೋಗ ಪಡೆಯುವುದರ ಬಗ್ಗೆ ಹೆಚ್ಚು ಗಮನಹರಿಸಿ ಎಂದು ಹೇಳಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…