tamanvi
ಕರಾವಳಿ

ಜ. 11ರಂದು ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆ ಈಶ್ವರಮಂಗಲದಲ್ಲಿ ಉದ್ಘಾಟನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ 17ನೇ ಶಾಖೆ ಈಶ್ವರಮಂಗಲದಲ್ಲಿ ಜ. 10ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ. ಈಶ್ವರಮಂಗಲ ಮುಖ್ಯರಸ್ತೆಯ ಶ್ರೀ ಗಣೇಶ್ ಕಾಂಪ್ಲೆಕ್ಸ್’ನ ಪ್ರಥಮ ಮಹಡಿಯಲ್ಲಿ ಶಾಖೆ ಕಾರ್ಯಾರಂಭ ಮಾಡಲಿದೆ ಎಂದು ಸಂಘದ ಅಧ್ಯಕ್ಷ ಸವಣೂರು ಸೀತಾರಾಮ ರೈ ಹೇಳಿದರು.

maithri

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು ಅವರು ಭದ್ರತಾ ಕೊಠಡಿ ಉದ್ಘಾಟಿಸಲಿದ್ದಾರೆ. ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಕಂಪ್ಯೂಟರ್ ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಪ್ರಥಮ ಠೇವಣಿ ಪತ್ರವನ್ನು ಬಿಡುಗಡೆ ಮಾಡಲಿದ್ದಾರೆ ಎಂದು ವಿವರಿಸಿದರು.

ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕ ಎಸ್.ಬಿ. ಜಯರಾಮ್ ರೈ, ನೆಟ್ಟಣಿಗೆ ಮುಡ್ನೂರು ಗ್ರಾಪಂ ಅಧ್ಯಕ್ಷೆ ಪೌಝಿಯ ಇಬ್ರಾಹಿಂ ಕೆ., ಶ್ರೀ ಗಣೇಶ್ ಕಾಂಪ್ಲೆಕ್ಸ್ ಕಟ್ಟಡ ಮಾಲಕ ಗಣೇಶ್ ರೈ ಎಂ. ಮುಳಿಪಡ್ಪು ಮುಖ್ಯ ಅತಿಥಿಗಳಾಗಿರುವರು ಎಂದರು.

2002ರಲ್ಲಿ ಆರಂಭಗೊಂಡ ಆದರ್ಶ ವಿವಿದೋದ್ಧೇಶ ಸಹಕಾರ ಸಂಘವು ಜಿಲ್ಲೆಯ ಪುತ್ತೂರು, ಸುಳ್ಯ, ಸುಬ್ರಹ್ಮಣ್ಯ, ವಿಟ್ಲ, ಉಜಿರೆ, ಕಡಬ, ಸವಣೂರು, ಸಾಲೆತ್ತೂರು, ಕುಂಬ್ರ, ಬೆಳ್ಳಾರೆ, ಪಂಜ, ಬೊಳುವಾರು, ಮಡಂತ್ಯಾರು, ಬಿ.ಸಿ. ರೋಡ್, ಕಲ್ಲಡ್ಕ, ಪಾಂಡೇಶ್ವರ ಮೊದಲಾದ ಕಡೆಗಳಲ್ಲಿ ಒಟ್ಟು 16 ಶಾಖೆಗಳನ್ನು ಹೊಂದಿದೆ. ಮುಂದಿನ 25 ವರ್ಷಗಳಾಗುವಾಗ 20 ಶಾಖೆಗಳನ್ನು ಹೊಂದುವ ಆಶಯ ಹೊಂದಿದ್ದೇವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಉಪಾಧ್ಯಕ್ಷ ಎನ್. ಸುಂದರ ರೈ, ಆಡಳಿತ ಮಂಡಳಿ ಸದಸ್ಯರಾದ ಅಶ್ವಿನ್ ಎಲ್. ಶೆಟ್ಟಿ, ಜೈರಾಜ್ ಭಂಡಾರಿ ನೊಣಾಲು, ಮಹಾಪ್ರಬಂಧಕ ವಸಂತ ಜಾಲಾಡಿ, ಸಹಾಯಕ ಮಹಾಪ್ರಬಂಧಕ ಸುನಾದ್ ರಾಜ್ ಶೆಟ್ಟಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…