tamanvi
ಕರಾವಳಿ

ಧರ್ಮಸ್ಥಳ – ಸೌತಡ್ಕ – ಬೆಳ್ತಂಗಡಿ ನಡುವೆ ರೈಲು ಸಂಪರ್ಕಕ್ಕೆ ಬೇಡಿಕೆ!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯದ ಪ್ರಮುಖ ಧಾರ್ಮಿಕ ಕೇಂದ್ರಗಳಾದ ಧರ್ಮಸ್ಥಳ, ಸೌತಡ್ಕ ಸೇರಿದಂತೆ ಹಲವು ಪ್ರವಾಸಿ ತಾಣಗಳಿರುವ ಬೆಳ್ತಂಗಡಿ ತಾಲೂಕಿಗೆ ರೈಲು ಸಂಪರ್ಕ ಬೇಕೆಂಬ ಬೇಡಿಕೆ ಮತ್ತೆ ಸಾರ್ವಜನಿಕರಿಂದ ವ್ಯಕ್ತವಾಗುತ್ತಿದೆ.

maithri

ಬೆಳ್ತಂಗಡಿ ತಾಲೂಕಿಗೆ ಇನ್ನೂ ನೇರ ರೈಲು ಸಂಪರ್ಕವಿಲ್ಲ. ಬಂಟ್ವಾಳವೇ ಸಮೀಪದ ಕೊನೆಯ ರೈಲು ನಿಲ್ದಾಣ. ಜನರು 40–50 ಕಿ.ಮೀ ದೂರ ರಸ್ತೆ ಮೂಲಕ ಪ್ರಯಾಣಿಸಬೇಕಾಗಿದೆ.

ಈ ಹಿಂದೆ ಸುಬ್ರಹ್ಮಣ್ಯ – ಧರ್ಮಸ್ಥಳ – ಕೊಲ್ಲೂರು ರೈಲು ಮಾರ್ಗದ ಸರ್ವೇ ನಡೆದರೂ, ಯೋಜನೆ ಕಡತದಲ್ಲೇ ಉಳಿದಿದೆ. ಈ ಮಾರ್ಗ ಜಾರಿಯಾದರೆ ಭಕ್ತರು, ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಸಂಚಾರ ಸುಲಭವಾಗುವ ಜೊತೆಗೆ ವಾಣಿಜ್ಯ, ಕೃಷಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಉತ್ತೇಜನ ಸಿಗಲಿದೆ.

ಅರಣ್ಯ ವ್ಯಾಪ್ತಿ ಅಡ್ಡಿಯಾಗಿದ್ದರೂ, ಪರ್ಯಾಯ ಯೋಜನೆಯ ಮೂಲಕ ಈ ರೈಲು ಸಂಪರ್ಕ ಸಾಧ್ಯವೆಂಬ ಅಭಿಪ್ರಾಯವಿದೆ. ಬೆಳ್ತಂಗಡಿ ತಾಲೂಕಿಗೆ ರೈಲು ಸಂಪರ್ಕ ಕಲ್ಪಿಸುವಂತೆ ಸಾರ್ವಜನಿಕರಿಂದ ಮತ್ತೆ ಒತ್ತಾಯ ಹೆಚ್ಚಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…