tamanvi
ಕರಾವಳಿ

ಅಂತರಾಜ್ಯ ಮೀನುಗಾರಿಕಾ ಸಮಸ್ಯೆ ಪರಿಹಾರಕ್ಕೆ ಮುಂದಾದ ಮಹಾರಾಷ್ಟ್ರ ಸಚಿವರು – ಯಶಪಾಲ್ ಸುವರ್ಣ ಭೇಟಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕರಾವಳಿ: ಕರಾವಳಿ ಕರ್ನಾಟಕದ ಮೀನುಗಾರರು ಅಂತರಾಜ್ಯ ಮೀನುಗಾರಿಕೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್ ರಾಣೆ ಅವರನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಭೇಟಿ ಮಾಡಿ ಚರ್ಚಿಸಿದರು.

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರು ಆಳ ಸಮುದ್ರ ಮೀನುಗಾರಿಕೆಗೆ ತೆರಳುವ ಸಂದರ್ಭದಲ್ಲಿ ವ್ಯಾಪ್ತಿ ಮೀರಿದ ಆರೋಪದ ಮೇಲೆ ಪ್ರಕರಣ ದಾಖಲಿಸಿ ಹೆಚ್ಚಿನ ದಂಡ ವಿಧಿಸಲಾಗುತ್ತಿರುವ ಕುರಿತು ಶಾಸಕ ಸುವರ್ಣ ಸಚಿವರ ಗಮನಕ್ಕೆ ತಂದರು. ಈ ಸಮಸ್ಯೆಯಿಂದ ಕರಾವಳಿ ಮೀನುಗಾರರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಅವರು ಮನವಿ ಮಾಡಿದರು.

ಅಂತರಾಜ್ಯ ಮಟ್ಟದಲ್ಲಿ ಸಮನ್ವಯತೆ ಸಾಧಿಸಲು ರಾಷ್ಟ್ರೀಯ ಮೀನುಗಾರಿಕಾ ನೀತಿ ಜಾರಿಗೆ ತರಬೇಕು ಹಾಗೂ ಎಲ್ಲಾ ರಾಜ್ಯಗಳ ಸಚಿವರು ಮತ್ತು ಮೀನುಗಾರ ಮುಖಂಡರನ್ನು ಒಳಗೊಂಡ ಸಮನ್ವಯ ಸಮಿತಿ ರಚಿಸಬೇಕೆಂದು ಅವರು ಸಲಹೆ ನೀಡಿದರು.

ಮಲ್ಪೆ ಮೀನುಗಾರಿಕಾ ಬಂದರಿಗೆ ಅಧಿಕಾರಿಗಳ ನಿಯೋಗದೊಂದಿಗೆ ಭೇಟಿ ನೀಡುವಂತೆ ಕೂಡ ಆಹ್ವಾನಿಸಲಾಯಿತು. ಮನವಿಗೆ ಸ್ಪಂದಿಸಿದ ಸಚಿವ ನಿತೇಶ್ ರಾಣೆ, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಾಳುಮೆಣಸು ಬೆಳೆಗಾರರಿಗೆ ಗುಡ್‌ನ್ಯೂಸ್; ವಿವಿಧ ಯೋಜನೆಗಳಡಿ ಆರ್ಥಿಕ ನೆರವು: ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ರಾಜ್ಯದ ಕಾಳುಮೆಣಸು ಬೆಳೆಗಾರರಿಗೆ ವಿವಿಧ ಸರ್ಕಾರಿ ಯೋಜನೆಗಳಡಿ ಆರ್ಥಿಕ ನೆರವು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…