ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ ಹೆಚ್. ಡಿ.ದೇವೆಗೌಡ ಅವರು ಮಾರ್ಚ್ 1 ರಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಮಾರ್ಚ್ 1ರಂದು ಸಂಜೆ 5.20ಕ್ಕೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿರುವ ಅವರು ಬಿಳಿನೆಲೆ ಹೆಲಿಪ್ಯಾಡ್ನಲ್ಲಿ ಇಳಿಯಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿ ಸಂಜೆ 6 ಗಂಟೆಗೆ ದೇವಸ್ಥಾನದಲ್ಲಿ ನಡೆಯುವ ವಿಶೇಷ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ಅಂದು ರಾತ್ರಿ ಸುಬ್ರಹ್ಮಣ್ಯದಲ್ಲಿನ ಅತಿಥಿ ಗೃಹದಲ್ಲಿ ವಾಸ್ತವ್ಯ ಮಾಡುವ ಅವರು, ಮಾರ್ಚ್ 2ರಂದು ಬೆಳಿಗ್ಗೆ 6 ಗಂಟೆಗೆ ಮತ್ತೆ ದೇವಸ್ಥಾನದಲ್ಲಿ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2.30ಕ್ಕೆ ಸುಬ್ರಹ್ಮಣ್ಯದಿಂದ ರಸ್ತೆ ಮಾರ್ಗದ ಮೂಲಕ ಬಿಳಿನೆಲೆ ಹೆಲಿಪ್ಯಾಡ್ಗೆ ತೆರಳಿ, ಮಧ್ಯಾಹ್ನ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ಪ್ರಯಾಣಿಸುವ ಕಾರ್ಯಕ್ರಮ ನಿಗದಿಯಾಗಿದೆ.ಈ ಪ್ರವಾಸದ ಅವಧಿಯಲ್ಲಿ ಅವರಿಗೆ ಝಡ್ ಪ್ಲಸ್ ಭದ್ರತೆ ಒದಗಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.






















