ಕರಾವಳಿ

ಸುರಕ್ಷತಾ ನಿಯಮ ನಿರ್ಲಕ್ಷಿಸುವ ಕೆಎಸ್‌ಆರ್‌ಟಿಸಿ ಚಾಲಕರಿಂದ ಸಾರ್ವಜನಿಕರಿಗೆ ಅಪಾಯ: ಕಠಿಣ ಕ್ರಮಕ್ಕಾಗಿ ನಿಗಮದ ಎಂಡಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಪತ್ರ!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳ ಚಾಲಕರು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ, ಅವೈಜ್ಞಾನಿಕವಾಗಿ ಬಸ್ ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರ ಜೀವಕ್ಕೆ ಅಪಾಯ ಎದುರಾಗಿದೆ ಎಂದು ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಆತಂಕ ವ್ಯಕ್ತಪಡಿಸಿದ್ದಾರೆ.

maithri

ಈ ಕುರಿತು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿರುವ ಅವರು, ಚಾಲಕರ ಬೇಜವಾಬ್ದಾರಿತನ ಹಾಗೂ ನಿಯಮ ಬಾಹಿರ ನಡವಳಿಕೆಯನ್ನು ತಡೆಯಲು ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ರಸ್ತೆ ಮಧ್ಯದಲ್ಲೇ ಬಸ್ ನಿಲುಗಡೆ:
ಮಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ಬಸ್‌ಗಳು ಪುತ್ತೂರಿನ ಮುರ, ನೆಹರು ನಗರ, ಮಂಜಲ್ಪುವಿನಂತಹ ಜನನಿಬಿಡ ಪ್ರದೇಶಗಳಲ್ಲಿ ರಸ್ತೆ ಬದಿಯಲ್ಲಿ ಜಾಗವಿದ್ದರೂ ಸಹ, ರಸ್ತೆಯ ಮಧ್ಯಭಾಗದಲ್ಲೇ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿ-ಇಳಿಸುತ್ತಿದ್ದಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ 75ರ ಸೂರಿಕುಮೇರಿ ಬಳಿ ಸುಸಜ್ಜಿತವಾದ ಸರ್ವಿಸ್ ರಸ್ತೆ ಲಭ್ಯವಿದ್ದರೂ, ಚಾಲಕರು ಮುಖ್ಯ ರಸ್ತೆಯಲ್ಲೇ ಬಸ್ ನಿಲ್ಲಿಸುತ್ತಿರುವುದು ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡುವಂತಿದೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇಂಡಿಕೇಟರ್ ಬಳಸದ ಚಾಲಕರು:
ಬಸ್ ಚಾಲಕರು ರಸ್ತೆ ಬದಿಗೆ ಅಥವಾ ತಿರುವುಗಳಲ್ಲಿ ವಾಹನವನ್ನು ತಿರುಗಿಸುವಾಗ ಯಾವುದೇ ಇಂಡಿಕೇಟರ್‌ಗಳನ್ನು (Indicators) ಹಾಕುತ್ತಿಲ್ಲ. ಇದರಿಂದ ಹಿಂದಿನಿಂದ ಬರುವ ವಾಹನ ಸವಾರರು ಗೊಂದಲಕ್ಕೀಡಾಗಿ ಭೀಕರ ಅಪಘಾತಗಳು ಸಂಭವಿಸುತ್ತಿವೆ. ಚಾಲಕರ ಈ ಓವರ್‌ಟೇಕ್ ಮಾಡುವ ಭರಾಟೆ ಮತ್ತು ಅಸಡ್ಡೆಯಿಂದಾಗಿ ಸುಗಮ ಸಂಚಾರಕ್ಕೆ ಅಡ್ಡಿಯಾಗುವುದಲ್ಲದೆ, ಪ್ರಾಣಹಾನಿಯಾಗುವ ಸಾಧ್ಯತೆಗಳು ದಟ್ಟವಾಗಿವೆ ಎಂದು ಅವರು ದೂರಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕರಿಂದ ಈ ಬಗ್ಗೆ ಸಾಲು ಸಾಲು ದೂರುಗಳು ಬರುತ್ತಿವೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಚಾಲಕರಿಗೆ ಸೂಕ್ತ ನಿರ್ದೇಶನ ನೀಡುವ ಮೂಲಕ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡಬೇಕು ಎಂದು ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ಕೆಎಸ್‌ಆರ್‌ಟಿಸಿ ಆಡಳಿತ ಮಂಡಳಿಗೆ ಆಗ್ರಹಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿ!! ರಕ್ಷಣಾ ಕಾರ್ಯಾಚರಣೆ ನಡೆಸಿದ ಈಶ್ವರ್ ಮಲ್ಪೆ, ಅಗ್ನಿಶಾಮಕ ಸಿಬ್ಬಂದಿ!

ಆಕಸ್ಮಿಕವಾಗಿ ಬಾವಿಗೆ ಬಿದ್ದ ದಂಪತಿಯನ್ನು ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಉಡುಪಿಯ ಕೆಮ್ಮಣ್ಣು…

ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್’ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

ಉಜಿರೆ: ಬೆಳ್ತಂಗಡಿ ಬಳಿ ರೆಂಕೆದಗುತ್ತು ಎಂಬಲ್ಲಿರುವ ಸಿರಿ ಮಾತೃಶ್ರೀ ಇಂಡಸ್ಟ್ರಿಯಲ್…