tamanvi
ಕರಾವಳಿ

ನಾಳೆಯಿಂದ ಗುಡುಗು ಸಹಿತ ಮಳೆ ಸಾಧ್ಯತೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕರಾವಳಿ ಪ್ರದೇಶದಲ್ಲಿ ಮೇ 6 ರಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

maithri

ಮಂಗಳವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬುಧವಾರದಿಂದ ವಾರಾಂತ್ಯದವರೆಗೆ ಕರಾವಳಿಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಬಿರುಗಾಳಿ ಮತ್ತು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಇದೇ ಅವಧಿಯಲ್ಲಿ ಉತ್ತರ ಒಳನಾಡಿನ ಕರ್ನಾಟಕದಲ್ಲೂ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಸೋಮವಾರ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಬಿಸಿ ಮತ್ತು ಸೆಕೆಯಿಂದ ಕೂಡಿದ ವಾತಾವರಣವಿತ್ತು. ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಬೆಳಗ್ಗೆ ಮೋಡ ಕವಿದ ವಾತಾವರಣವಿದ್ದರೂ, ಎಲ್ಲಿಯೂ ಮಳೆಯಾಗಿಲ್ಲ. ಮೈಸೂರು ಮತ್ತು ಚಾಮರಾಜನಗರದ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗಿರುವುದು ವರದಿಯಾಗಿದೆ.

ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿ.ಸೆ. ದಾಖಲಾಗಿದ್ದು, ಇದು ಸಾಮಾನ್ಯಕ್ಕಿಂತ 0.3 ಡಿ.ಸೆ. ಕಡಿಮೆಯಾಗಿದೆ. ಕನಿಷ್ಠ ತಾಪಮಾನ 26.1 ಡಿ.ಸೆ. ಇದ್ದು, ಇದು ಸಾಮಾನ್ಯಕ್ಕಿಂತ 0.8 ಡಿ.ಸೆ. ಹೆಚ್ಚಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…