ಕರಾವಳಿ

ಮನೆ ಗೋಡೆಯಲ್ಲಿ ಮರಿಯಿಟ್ಟ ತಾಯಿ ನಾಗರ! 26 ಮರಿಗಳ ರಕ್ಷಿಸಿದ ಶೌರ್ಯ ತಂಡದ ಉರಗಪ್ರೇಮಿ!

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

maithri

ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ, ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯ ಸ್ನೇಕ್ ಅನಿಲ್ ಅವರಿಗೆ ಮೇ 6ರಂದು ಮಾಹಿತಿ ನೀಡಿದರು. ಈ ವೇಳೆ ಆಗಮಿಸಿದ ಅವರು ತಾಯಿ ನಾಗರಹಾವನ್ನು ಹಿಡಿದಿದ್ದು ಈ ವೇಳೆ ಗೋಡೆಯಲ್ಲಿ ಮರಿಗಳು ಕಂಡು ಬಂದವು. ಗೋಡೆಯಲ್ಲಿದ್ದ 26 ಮರಿಗಳನ್ನು ಹಿಡಿದು ಅವುಗಳನ್ನು ತಾಯಿ ಸಹಿತ ಚಾರ್ಮಾಡಿ ಘಾಟಿಯ ಅರಣ್ಯ ಪ್ರದೇಶದ ಸುರಕ್ಷಿತ ಜಾಗದಲ್ಲಿ ಮೇ 7ರಂದು ಬಿಡಲಾಗಿದೆ.

ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯರು ಸಹಕರಿಸಿದರು. ಈ ಮರಿಗಳು ಸುಮಾರು 10 ದಿನಗಳ ಹಿಂದೆ ಮೊಟ್ಟೆಯಿಂದ ಹೊರಬಂದಿರಬಹುದು ಎಂದು ಅಂದಾಜಿಸಲಾಗಿದ್ದು ಎಲ್ಲವೂ ಆರೋಗ್ಯ ಪೂರ್ಣವಾಗಿ ಇರುವುದಾಗಿ ಅನಿಲ್ ಅವರು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ ನೆರಿಯ ಗ್ರಾಮದ ಗುಂಡಿಕಂಡ ಎಂಬಲ್ಲಿ ಮನೆಯ ಗೋಡೆಯೊಂದರಲ್ಲಿ ಪತ್ತೆಯಾಗಿದ್ದ ನಾಗರಹಾವಿನ 16 ಮೊಟ್ಟೆಗಳನ್ನು ಅನಿಲ್ ಅವರು ರಕ್ಷಿಸಿ ಅವುಗಳಿಗೆ ಕೃತಕ ಕಾವು ನೀಡಿ ಮರಿಗಳು ಹೊರಬಂದ ಬಳಿಕ ಭಾನುವಾರ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದರು. ಈ ಮೊಟ್ಟೆಗಳನ್ನು ಇರುವೆಗಳ ದಾಳಿಯಿಂದ ರಕ್ಷಿಸಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…